ರೋಹಿತ್ ಶರ್ಮಾ ನಾಯಕತ್ವದಲ್ಲಿ ಚಾಂಪಿಯನ್ ಆಗಿ ಹೊರಹೊಮ್ಮಿದ ತಂಡಕ್ಕೆ ಬಿಸಿಸಿಐ 58 ಕೋಟಿ ರೂಪಾಯಿ ನಗದು ಬಹುಮಾನ ಘೋಷಿಸಿದೆ. ಆಟಗಾರರು, ತರಬೇತುದಾರರು, ಸಹಾಯಕ ಸಿಬ್ಬಂದಿ ಮತ್ತು ಆಯ್ಕೆ ಸಮಿತಿ ಸದಸ್ಯರಿಗೆ ಬಹುಮಾನದ ಹಣವನ್ನು ಮಂಡಳಿ ಘೋಷಿಸಿದೆ.
ಹೌದು ಮಾ.9 ರಂದು ನಡೆದ ಚಾಂಪಿಯನ್ಸ್ ಟ್ರೋಫಿಯ ಫೈನಲ್ಸ್ನಲ್ಲಿ ಭಾರತ ಗೆಲುವು ಸಾಧಿಸಿದ ಬಳಿಕ ಇಂದು ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ 58 ಕೋಟಿ ರೂ.ಗಳ ನಗದು ಬಹುಮಾನವನ್ನು ಪ್ರಕಟಿಸಿದೆ. ಕಳೆದ ವರ್ಷ ಬಾರ್ಬಡೋಸ್ನಲ್ಲಿ ನಡೆದ ಟಿ20 ವಿಶ್ವಕಪ್ ಗೆದ್ದ ಬಳಿಕ ಭಾರತ ತಂಡಕ್ಕೆ ಬಿಸಿಸಿಐ 125 ಕೋಟಿ ರೂ.ಗಳ ನಗದು ಬಹುಮಾನ ನೀಡಿ ಗೌರವಿಸಿತ್ತು.
ರೋಹಿತ್ ಶರ್ಮಾ ನಾಯಕತ್ವದಲ್ಲಿ ಭಾರತ ತಂಡವು ಎಲ್ಲಾ ಪಂದ್ಯಗಳನ್ನು ಗೆದ್ದುಕೊಂಡಿತ್ತು. ಮೊದಲ ಪಂದ್ಯದಲ್ಲೇ ಬಾಂಗ್ಲಾದೇಶ ವಿರುದ್ಧ 6 ವಿಕೆಟ್ಗಳಿಂದ ಗೆಲುವು ಸಾಧಿಸಿದ್ದ ಭಾರತ ಬಳಿಕ ಪಾಕಿಸ್ತಾನ ವಿರುದ್ಧ ಆರು ವಿಕೆಟ್ಗಳ ಜಯ ಸಾಧಿಸಿತ್ತು. ನ್ಯೂಜಿಲೆಂಡ್ ವಿರುದ್ಧ 44 ರನ್ಗಳ ಜಯ ಪಡೆದಿತ್ತು.
ಸೆಮಿಫೈನಲ್ನಲ್ಲಿ ಆಸ್ಟ್ರೇಲಿಯಾ ವಿರುದ್ಧ 4 ವಿಕೆಟ್ಗಳ ಜಯ ಸಾಧಿಸಿ ಫೈನಲ್ ಪ್ರವೇಶಿಸಿತ್ತು. ಮಾರ್ಚ್ 9 ರಂದು ನಡೆದ ಫೈನಲ್ನಲ್ಲಿ ಭಾರತ ತಂಡವು ನ್ಯೂಜಿಲೆಂಡ್ ವಿರುದ್ಧ ನಾಲ್ಕು ವಿಕೆಟ್ಗಳ ಜಯ ಸಾಧಿಸಿ ಮೂರನೇ ಬಾರಿ ಚಾಂಪಿಯನ್ಸ್ ಟ್ರೋಫಿಯನ್ನು ಗೆದ್ದುಕೊಂಡಿತ್ತು.