HomeGadag Newsಖರೀದಿಯ ವೇಳೆ ಜಾಗ್ರತೆಯಿಂದ ವ್ಯವಹರಿಸಿ: ಎ.ಜೆ. ಮಾಲ್ದಾರ

ಖರೀದಿಯ ವೇಳೆ ಜಾಗ್ರತೆಯಿಂದ ವ್ಯವಹರಿಸಿ: ಎ.ಜೆ. ಮಾಲ್ದಾರ

For Dai;y Updates Join Our whatsapp Group

Spread the love

ವಿಜಯಸಾಕ್ಷಿ ಸುದ್ದಿ, ಗದಗ: ಗ್ರಾಹಕರು ತಾವು ಖರೀದಿಸಿದ ಸಾಮಗ್ರಿಯ ಗುಣಮಟ್ಟ ಅಥವಾ ಪ್ರಮಾಣದಲ್ಲಿ ವ್ಯತ್ಯಾಸ ಕಂಡುಬಂದಲ್ಲಿ ಆ ಸಂದರ್ಭದಲ್ಲಿ ಡಿಜಿಟಲ್ ನ್ಯಾಯದ ಆ್ಯಪ್ ಮೂಲಕ ಪ್ರಕರಣ ದಾಖಲಿಸಿ ತ್ವರಿತ ಹಾಗೂ ಪರಿಣಾಮಕಾರಿಯಾಗಿ ಪರಿಹಾರ ಕಂಡುಕೊಳ್ಳಬಹುದಾಗಿದೆ ಎಂದು ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗದ ಅಧ್ಯಕ್ಷ ಎ.ಜೆ. ಮಾಲ್ದಾರ ಹೇಳಿದರು.

ಗದಗ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆ, ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗ, ಕಾನೂನು ಮಾಪನ ಶಾಸ್ತ್ರ ಇಲಾಖೆ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಪ್ರಾಧಿಕಾರ, ವಾರ್ತಾ ಮತ್ತು ಸಾ.ಸಂ ಇಲಾಖೆ ಹಾಗೂ ವಿ.ಆರ್. ಕುಷ್ಟಗಿ ಮೆಮೋರಿಯಲ್ ಕಾಲೇಜ್ ಆಫ್ ಕಾಮರ್ಸ್ ಗದಗ ಇವರ ಸಂಯುಕ್ತಾಶ್ರಯದಲ್ಲಿ ಗದಗ-ಬೆಟಗೇರಿಯ ವಿ.ಆರ್. ಕುಷ್ಟಗಿ ಮೆಮೋರಿಯಲ್ ಕಾಲೇಜ್ ಆಫ್ ಕಾಮರ್ಸ್ ಆವರಣದ ಸುವರ್ಣ ಮಹೋತ್ಸವ ಭವನದಲ್ಲಿ ಬುಧವಾರ ನಡೆದ ರಾಷ್ಟ್ರೀಯ ಗ್ರಾಹಕರ ದಿನಾಚರಣೆ-2025 ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.

ಗ್ರಾಹಕರು ಯಾವುದೇ ವಸ್ತು ಖರೀದಿಸುವಾಗ ಹಾಗೂ ಸೇವೆ ಪಡೆಯುವಾಗ ಜಾಗೃತೆಯಿಂದ ವ್ಯವಹರಿಸಬೇಕು. ಅದರ ಗುಣಮಟ್ಟ, ಪ್ರಮಾಣ, ವ್ಯಾರಂಟಿ, (ಎಕ್ಸ್‌ಪೈರಿ ಡೇಟ್) ಅವಧಿ ಮುಕ್ತಾಯ ಪರಿಶೀಲನೆ ಅತ್ಯವಶ್ಯಕವಾಗಿದೆ. ಗ್ರಾಹಕರಿಗೆ ಅನ್ಯಾಯವಾದಲ್ಲಿ ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗವನ್ನು ಸಂಪರ್ಕಿಸಿ ಪರಿಹಾರ ಕಂಡುಕೊಳ್ಳಬಹುದಾಗಿದೆ ಎಂದು ಹೇಳಿದರು.

ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗದ ಮಹಿಳಾ ಸದಸ್ಯರಾದ ಯಶೋಧಾ ಪಾಟೀಲ ಪ್ರಾಸ್ತಾವಿಕವಾಗಿ ಮಾತನಾಡಿ, ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗದಲ್ಲಿ ಗ್ರಾಹಕರುಗಳು ಅತಿವೇಗದಲ್ಲಿ ವ್ಯಾಜ್ಯಗಳನ್ನು ದಾಖಲಿಸಬಹುದು ಹಾಗೂ ಸಂಬಂಧಿತ ವ್ಯಾಜ್ಯದ ಸಾಕ್ಷಿಗಳನ್ನು ಡಿಜಿಟಲ್ ನ್ಯಾಯದ ಆ್ಯಪ್‌ನಲ್ಲಿ ಸಲ್ಲಿಸಬಹುದಾಗಿದೆ. ತ್ವರಿತಗತಿಯಲ್ಲಿ ನ್ಯಾಯ ದೊರಕಿಸಿಕೊಡುವುದೇ ಇದರ ಮೂಲ ಉದ್ದೇಶ ಎಂದರು.

ಇದೇ ಸಂದರ್ಭದಲ್ಲಿ ಕಾನೂನು ಮಾಪನ ಶಾಸ್ತ್ರ ಇಲಾಖೆ ವತಿಯಿಂದ ತೂಕ ಮತ್ತು ಅಳತೆ ಹಾಗೂ ಪೊಟ್ಟಣ ಸಾಮಗ್ರಿಗಳ ವಸ್ತು ಪ್ರದರ್ಶನ, ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಪ್ರಾಧಿಕಾರದವರ ವತಿಯಿಂದ ಆಹಾರ ಸುರಕ್ಷತೆ ಹಾಗೂ ಆಹಾರ ಕಲಬೆರಕೆ ಕುರಿತು ಭಿತ್ತಿಚಿತ್ರ ಪ್ರದರ್ಶನ, ಜಿಲ್ಲೆಯ ಗ್ಯಾಸ್ ಏಜೆನ್ಸಿಯವರ ವತಿಯಿಂದ ಎಲ್‌ಪಿಜಿ ಸುರಕ್ಷತೆ ಕುರಿತು ಪ್ರಾತ್ಯಕ್ಷಿಕೆ ಮತ್ತು ಭಿತ್ತಿಚಿತ್ರಗಳ ಪ್ರದರ್ಶನ ನಡೆಯಿತು.

ಕಾರ್ಯಕ್ರಮದಲ್ಲಿ ಆದರ್ಶ ಶಿಕ್ಷಣ ಸಮಿತಿ ಅಧ್ಯಕ್ಷ ಕೆ.ವಿ. ಕುಷ್ಟಗಿ, ಆದರ್ಶ ಶಿಕ್ಷಣ ಸಮಿತಿ ಚೇರಮನ್, ಹಿರಿಯ ಲೆಕ್ಕ ಪರಿಶೋಧಕ ಎ.ಎಲ್. ಪೋತ್ನೀಸ್, ಆದರ್ಶ ಶಿಕ್ಷಣ ಸಮಿತಿಯ ಕಾರ್ಯದರ್ಶಿ ಎ.ಡಿ. ಗೋಡಖಿಂಡಿ, ವಿ.ಆರ್. ಕುಷ್ಟಗಿ ಮೆಮೋರಿಯಲ್ ಕಾಲೇಜ್ ಆಫ್ ಕಾಮರ್ಸ್‌ನ ಪ್ರಾಂಶುಪಾಲ ಡಾ. ವಿ.ಟಿ. ನಾಯ್ಕರ್, ಡಿ.ಎಸ್. ಕುರ್ತಕೋಟಿ ಮೆಮೋರಿಯಲ್ ಪಿಯು ಕಾಲೇಜ್ ಆಫ್ ಕಾಮರ್ಸ್ ಆದರ್ಶ ಶಿಕ್ಷಣ ಸಮಿತಿ ಪ್ರಾಂಶುಪಾಲ ಆರ್.ಆರ್. ಕುಲಕರ್ಣಿ, ಆದರ್ಶ ಶಿಕ್ಷಣ ಸಮಿತಿ ಪ್ರಾಂಶುಪಾಲರಾದ ಎಲ್.ಎಸ್. ರೇಶ್ಮಿ, ಕಾನೂನು ಮಾಪನಶಾಸ್ತ್ರ ಇಲಾಖೆಯ ಸಹಾಯಕ ನಿಯಂತ್ರಕರಾದ (ಗ್ರೇಡ್-2) ಆರ್.ಎಸ್. ಪಟ್ಟಣಶೆಟ್ಟಿ ಉಪಸ್ಥಿತರಿದ್ದರು.

ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆ ಉಪನಿರ್ದೇಶಕ ಎಮ್.ಎಸ್. ರಮೇಶ ಸ್ವಾಗತಿಸಿದರು. ಬಾಹುಬಲಿ ಜೈನರ ನಿರೂಪಿಸಿದರು.

ಜಿಲ್ಲಾಧಿಕಾರಿಗಳ ಕಾನೂನು ಸಲಹೆಗಾರರಾದ ಎಸ್.ಜಿ. ಪಲ್ಲೇದ ಮಾತನಾಡಿ, ಪ್ರತಿವರ್ಷ ಡಿ. 24ರಂದು ರಾಷ್ಟ್ರೀಯ ಗ್ರಾಹಕರ ದಿನಾಚರಣೆ ಆಚರಣೆ ಮಾಡಲಾಗುತ್ತದೆ ಹಾಗೂ ಮಾರ್ಚ್ 15ರಂದು ವಿಶ್ವ ಗ್ರಾಹಕರ ದಿನಾಚರಣೆಯನ್ನು ಆಚರಿಸಲಾಗುತ್ತದೆ. ಭಾರತದಲ್ಲಿ ಗ್ರಾಹಕರ ದಿನಾಚರಣೆಯು 1986ರಲ್ಲಿ ಜಾರಿಗೆ ಬಂದಿದೆ. ಸುಪ್ರೀಮ್ ಕೋರ್ಟ್‌ನ ಆದೇಶದಂತೆ ಗ್ರಾಹಕರ ಕುಂದುಕೊರತೆಗಳ ಪರಿಹಾರಕ್ಕಾಗಿ ಇರುವ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗವು ಜಿಲ್ಲಾ, ರಾಜ್ಯ, ಕೇಂದ್ರ ಮಟ್ಟದಲ್ಲಿ ಕಾರ್ಯನಿರ್ವಹಿಸುತ್ತಿದೆ ಎಂದರು.


Spread the love
Vijaya Sakshi
Vijaya Sakshi
Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

LEAVE A REPLY

Please enter your comment!
Please enter your name here

E-Paper

E-paper

Must Read

spot_img
error: Content is protected !!