ಪರಿಸರ ರಕ್ಷಣೆಗಾಗಿ ಜಾಗೃತರಾಗಿ

0
Spread the love

ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ: ಪಟ್ಟಣದ ಬಿ.ಸಿ.ಎನ್ ಸ್ಪೆಕ್ಟ್ರಮ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಸಸಿಗಳನ್ನು ನೆಡುವುದರೊಂದಿಗೆ ಅರ್ಥಪೂರ್ಣವಾಗಿ ವಿಶ್ವ ಪರಿಸರ ದಿನಾಚರಣೆಯನ್ನು ಆಚರಿಸಲಾಯಿತು.

Advertisement

ಈ ವೇಳೆ ಮಾತನಾಡಿದ ಶಾಲೆಯ ಆಡಳಿತಾಧಿಕಾರಿ ನಾಗರಾಜ ಯಂಡಿಗೇರಿ, ಪ್ರಪಂಚದಲ್ಲಿನ ಎಲ್ಲ ಜೀವರಾಶಿಗಳ ರಕ್ಷಣೆ, ಪಾಲನೆ-ಪೋಷಣೆಯ ಜವಾಬ್ದಾರಿ ತನ್ನನೂ ಸೇರಿದಂತೆ ಮಾನವನ ಮೇಲಿದೆ. ಪ್ರಾಕೃತಿಕ ಸಮತೋಲನ ಕಾಯಲು ಪರಿಸರ ರಕ್ಷಣೆ ಅವಶ್ಯವಾಗಿದ್ದು, ಅದಕ್ಕಾಗಿ ಪ್ರತಿಯೊಬ್ಬರೂ ಜಾಗೃತರಾಗಲೇಬೇಕಾದ ಅನಿವಾರ್ಯತೆ ಇದೆ. ಮಗುವಿಗೊಂದು ಮರ ಕಾರ್ಯಕ್ರಮದ ಅಡಿಯಲ್ಲಿ ಶಾಲೆಯಲ್ಲಿನ ಪ್ರತಿಯೊಬ್ಬ ಮಗುವಿಗೂ ಸಸಿಗಳನ್ನು ವಿತರಿಸಿ ಅವುಗಳನ್ನು ನೀಡಲು ಸಲಹೆ ನೀಡಿದರು.

ಮುಖ್ಯೋಪಾಧ್ಯಾಯ ವೀರೇಶ ಕಮ್ಮಾರ, ಶಿಕ್ಷಕರು, ಸಿಬ್ಬಂದಿ ಮತ್ತು ವಿದ್ಯಾರ್ಥಿಗಳಿದ್ದರು.


Spread the love

LEAVE A REPLY

Please enter your comment!
Please enter your name here