ವಿಜಯಸಾಕ್ಷಿ ಸುದ್ದಿ, ಗದಗ: ಪಿಂಚಣಿ ವಂಚಿತ ಅನುದಾನಿತ ಶಾಲೆ-ಕಾಲೇಜುಗಳ ನೌಕರರು ಡಿ. 17ರಂದು ಬೆಳಗಾವಿ ಚಲೋ ಹಮ್ಮಿಕೊಂಡಿದ್ದು, ಈ ಹೋರಾಟದಲ್ಲಿ ಸುಮಾರು ೧೮ ಸಾವಿರ ನೌಕರರು ಭಾಗಿಯಾಗಲಿದ್ದಾರೆ ಎಂದು ಅನುದಾನಿತ ಶಾಲೆ-ಕಾಲೇಜುಗಳ ನೌಕರರ ಸಂಘದ ಅಧ್ಯಕ್ಷ ಜಿ. ಹನುಮಂತಪ್ಪ ಹೇಳಿದರು.
ಶನಿವಾರ ನಗರದ ಪತ್ರಿಕಾ ಭವನದಲ್ಲಿ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು, ೨೦೦೬ರಿಂದ ಈಚೆಗೆ ಅನುದಾನಿತ ಶಾಲಾ-ಕಾಲೇಜುಗಳ ನೌಕರರಿಗೆ ಎನ್ಪಿಎಸ್ ಸಹ ಇಲ್ಲ, ಹಳೆ ಪಿಂಚಣಿಯೂ ಇಲ್ಲ. ಪಿಂಚಣಿಗಾಗಿ ಕಳೆದ ವರ್ಷ ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಸತತ 141 ದಿನಗಳ ಕಾಲ ಧರಣಿ ನಡೆಸಿದರೂ ಸರಕಾರ ನಮ್ಮ ಮನವಿಗೆ ಸ್ಪಂದಿಸಿಲ್ಲ. ಹೀಗಾಗಿ ಸರಕಾರಕ್ಕೆ ಕೊನೆಯ ಎಚ್ಚರಿಕೆ ನೀಡುವ ಸಲುವಾಗಿ ಬೆಳಗಾವಿ ಚಲೋ ಹಮ್ಮಿಕೊಳ್ಳಲಾಗಿದೆ ಎಂದರು.
ಪಿAಚಣಿಗಾಗಿ ನಡೆದ ಹೋರಾಟಕ್ಕೆ ಬೆಂಬಲ ಸೂಚಿಸಿದ್ದ ಸಿದ್ದರಾಮಯ್ಯ, ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಪಿಂಚಣಿ ನೀಡುವುದಾಗಿ ಭರವಸೆ ನೀಡಿದ್ದರು. ಅಲ್ಲದೇ ಕಾಂಗ್ರೆಸ್ ತನ್ನ ಚುನಾವಣೆ ಪ್ರಣಾಳಿಕೆಯಲ್ಲಿಂiÀದ್ದೀ ವಿಚಾರವನ್ನು ಸೇರಿಸಿತು. ಆದರೆ ರಾಜ್ಯದಲ್ಲಿ ಕಾಂಗ್ರೆಸ್ ನೇತೃತ್ವದ ಸರಕಾರ ಅಧಿಕಾರಕ್ಕೆ ಬಂದು ಒಂದೂವರೆ ವರ್ಷ ಕಳೆದರೂ ಪಿಂಚಣಿ ಜಾರಿಗೊಳಿಸುವ ಯಾವುದೇ ಕೆಲಸ ಮಾಡಿಲ್ಲ ಎಂದು ಆರೋಪಿಸಿದರು.
ರಾಜ್ಯದಲ್ಲಿ 2006ಕ್ಕಿಂತ ಪೂರ್ವದಲ್ಲಿ ನೇಮಕವಾಗಿ, ಬಳಿಕ ಅನುದಾನಕ್ಕೆ ಒಳಪಟ್ಟು ಸೇವೆ ಸಲ್ಲಿಸಿದ ಸುಮಾರು ೪ ಸಾವಿರ ನೌಕರರು ಈಗಾಗಲೇ ನಿವೃತ್ತರಾಗಿದ್ದಾರೆ. ಆದರೂ ಸರಕಾರದ ಬಿಡಿಗಾಸೂ ಅವರಿಗೆ ಸಿಕ್ಕಿಲ್ಲ. ಸರಕಾರದ ಧೋರಣೆಯಿಂದ ಬೇಸತ್ತು ಕೆಲವರು ಆತ್ಮಹತ್ಯೆ ಮಾಡಿಕೊಂಡರು, ಹೃದಯಾಘಾತಕ್ಕೆ ಒಳಗಾಗಿ ಜೀವ ಕಳೆದುಕೊಂಡರೂ ಸರಕಾರ ಪಿಂಚಣಿ ವಂಚಿತರ ಕಣ್ಣೀರು ಒರೆಸುವ ಕೆಲಸ ಮಾಡುತ್ತಿಲ್ಲ ಎಂದು ಆಪಾದಿಸಿದರು. ಸುದ್ದಿಗೋಷ್ಠಿಯಲ್ಲಿ ಎಸ್.ಎಂ. ಅಗಡಿ, ರವಿ ಕೋಟೆ, ಬನೇಶ ನಾಯಕ, ಹೇಮಯ್ಯ ಕುಲಕರ್ಣಿ, ಬಸವರಾಜ ಕೊರ್ಲಹಳ್ಳಿ ಮುಂತಾದವರು ಉಪಸ್ಥಿತರಿದ್ದರು.