ಕೇರಳಕ್ಕೆ ಉಪಕಾರಿ, ಕರ್ನಾಟಕಕ್ಕೆ ಮಾರಿ: ಸಿದ್ದರಾಮಯ್ಯ ವಿರುದ್ಧ ಆರ್ ಅಶೋಕ್ ಕೆಂಡಾಮಂಡಲ!

0
Spread the love

ಬೆಂಗಳೂರು:- ಕೇರಳ ಪ್ರವಾಹ ಸಂತ್ರಸ್ತರಿಗೆ ಮನೆ ನಿರ್ಮಾಣ ಮಾಡುವ ವಿಚಾರವಾಗಿ ಸಿಎಂ ಸಿದ್ದರಾಮಯ್ಯ ವಿರುದ್ಧ ಆರ್ ಅಶೋಕ್ ಆಕ್ರೋಶ ಹೊರ ಹಾಕಿದ್ದಾರೆ.

Advertisement

ಈ ಬಗ್ಗೆ X ಮಾಡಿರುವ ಅಶೋಕ್, ಕೇರಳಕ್ಕೆ ಉಪಕಾರಿ; ಕರ್ನಾಟಕಕ್ಕೆ ಮಾರಿ ಎಂದು ಕಾಂಗ್ರೆಸ್​ ಸರ್ಕಾರದ ವಿರುದ್ದ ಹರಿಹಾಯ್ದಿದ್ದಾರೆ.

ಭ್ರಷ್ಟಾಚಾರದ ಕಳಂಕ ಮೆತ್ತಿಕೊಂಡು, ಭಂಡತನದಿಂದ ಖುರ್ಚಿ ಉಳಿಸಿಕೊಳ್ಳಲು ಹೆಣಗಾಡುತ್ತಿರುವ ಸಿಎಂ ಸಿದ್ದರಾಮಯ್ಯ ನವರ ಸರ್ಕಾರ, ಹೈಕಮಾಂಡ್ ನಾಯಕರನ್ನು ಮೆಚ್ಚಿಸಲು ಕನ್ನಡಿಗರ ತೆರಿಗೆ ಹಣವನ್ನು ಪೋಲು ಮಾಡುತ್ತಿದೆ ಎಂದು ಕಿಡಿಕಾರಿದ್ದಾರೆ.

ಅಕಾಲಿಕ ಮಳೆಯಿಂದ ಬೆಳೆ ಹಾನಿಗೊಳಗಾಗಿ ಸಂಕಷ್ಟದಲ್ಲಿರುವ ರೈತತರಿಗೆ ಪರಿಹಾರ ಕೊಡಲು ಹಣವಿಲ್ಲ. ಸರ್ಕಾರಿ ಆಸ್ಪತ್ರೆಗಳಲ್ಲಿ ಕಳಪೆ ಔಷಧಿಯಿಂದ ಸಾವನ್ನಪ್ಪಿರುವ ಬಾಣಂತಿ ಮಹಿಳೆಯರ ಕುಟುಂಬಗಳಿಗೆ ಪರಿಹಾರ ಕೊಟ್ಟಿಲ್ಲ. ಬೆಂಗಳೂರಿನ ಉದ್ದಗಲಕ್ಕೂ ಬಾಯ್ತೆರೆದಿರುವ ರಸ್ತೆಗುಂಡಿ ಮುಚ್ಚಲು ಹಣವಿಲ್ಲ. ಆದರೆ ಹೈಕಮಾಂಡ್ ನಾಯಕರನ್ನು ಓಲೈಸಲು ಕೇರಳದಲ್ಲಿ ಮನೆ ನಿರ್ಮಿಸಿಕೊಡಲು ಹೊರಟಿದೆ ಈ ಕಾಂಗ್ರೆಸ್​ ಸರ್ಕಾರ ಎಂದು ಆಕ್ರೋಶ ಹೊರ ಹಾಕಿದ್ದಾರೆ.


Spread the love

LEAVE A REPLY

Please enter your comment!
Please enter your name here