ಬೆಂಗಳೂರು: ಪತ್ನಿಯ ಕಿರುಕುಳ ತಾಳಲಾರದೇ ಬ್ಯಾಂಕ್‌ ಉದ್ಯೋಗಿ ಸೂಸೈಡ್!

0
Spread the love

ಬೆಂಗಳೂರು:- ಬೆಂಗಳೂರಿನ ಗಿರಿನಗರದಲ್ಲಿ ಪತ್ನಿಯಿಂದ ಕಿರಕುಳ ತಾಳಲಾರದೇ ಬ್ಯಾಂಕ್‌ ಉದ್ಯೋಗಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಜರುಗಿದೆ.

Advertisement

ನೇಣಿಗೆ ಶರಣಾದ ಪತಿಯನ್ನು ಗಗನ್ ರಾವ್ ಎಂದು ಗುರುತಿಸಲಾಗಿದೆ. 8 ತಿಂಗಳ ಹಿಂದಷ್ಟೇ ಮೇಘನಾ ಜಾವ್‌ ಅವರೊಂದಿಗೆ ಗಗನ್‌ ರಾವ್‌ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದರು. ಬ್ಯಾಂಕ್‌ ಉದ್ಯೋಗಿಯಾಗಿದ್ದ ಗಗನ್‌ ಪತ್ನಿ ವಿರುದ್ಧ ಕಿರುಕುಳ ಆರೋಪ ಮಾಡಿ ನೇಣಿಗೆ ಶರಣಾಗಿದ್ದಾರೆ. ಈ ಸಂಬಂಧ ಗಿರಿನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಪದೇ ಪದೇ ಗಂಡ ಗಗನ್ ಮೇಲೆ ಪತ್ನಿ ಮೇಘನಾ ಅನುಮಾನ ಪಡುತ್ತಿದ್ದಳಂತೆ. ಇದೇ ವಿಚಾರಕ್ಕೆ ಮನೆಯಲ್ಲಿ ಹಲವು ಬಾರಿ ಗಲಾಟೆ ಆಗಿತ್ತು. ಬಳಿಕ ಕೋಪಿಸಿಕೊಂಡು ತವರಿಗೆ ಹೋಗಿದ್ದ ಮೇಘನಾ, ಇತ್ತೀಚೆಗಷ್ಟೇ ಗಂಡನ ಮನೆಗೆ ವಾಪಸ್‌ ಬಂದಿದ್ದಳು. ನಿನ್ನೆ ರಾತ್ರಿ ಮತ್ತೆ ಗಲಾಟೆ ನಡೆದಿದೆ. ಇದರಿಂದ ಬೇಸತ್ತ ಗಗನ್‌ ನೇಣಿಗೆ ಶರಣಾಗಿದ್ದಾರೆ.

ಸದ್ಯ ಮೃತ ಗಗನ್‌ ಕುಟುಂಬಸ್ಥರು, ಮೇಘನಾ ವಿರುದ್ಧ ಮಾಟ ಮಂತ್ರ ಮಾಡಿ ಕಿರುಕುಳ ನೀಡಿರುವ ಆರೋಪ ಮಾಡುತ್ತಿದ್ದಾರೆ. ಪೋಲೀಸರು ತನಿಖೆ ಕೈಗೊಂಡಿದ್ದಾರೆ.


Spread the love

LEAVE A REPLY

Please enter your comment!
Please enter your name here