ಬೆಂಗಳೂರಿನ ಅಪಾರ್ಟ್‌ಮೆಂಟ್‌ʼಗಳಲ್ಲಿ ಸಮೀಕ್ಷೆಗೆ ಸಹಕರಿಸುತ್ತಿಲ್ಲ: ನಾಗಮೋಹನ್ ದಾಸ್

0
Spread the love

ಬೆಂಗಳೂರು: ಬೆಂಗಳೂರಿನಲ್ಲಿ ಕೇವಲ 36% ಮಾತ್ರ ಸಮೀಕ್ಷೆ ಆಗಿದ್ದು, ಅಪಾರ್ಟ್‌ಮೆಂಟ್‌ʼಗಳಲ್ಲಿ ಸಮೀಕ್ಷೆಗೆ ಸಹಕರಿಸುತ್ತಿಲ್ಲ ಎಂದು ಏಕಸದಸ್ಯ ಆಯೋಗದ ಅಧ್ಯಕ್ಷ ನ್ಯಾ. ಹೆಚ್.ಎನ್.ನಾಗಮೋಹನ್ ದಾಸ್ ಹೇಳಿದ್ದಾರೆ. ವಿಧಾನಸೌಧದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಬೆಂಗಳೂರಿನಲ್ಲಿ ಕೇವಲ 36% ಮಾತ್ರ ಸಮೀಕ್ಷೆ ಆಗಿದ್ದು,

Advertisement

ಅಪಾರ್ಟ್‌ಮೆಂಟ್‌ಗಳಲ್ಲಿ ಸಮೀಕ್ಷೆಗೆ ಸಹಕರಿಸುತ್ತಿಲ್ಲ. ಅವರ ಮಾಹಿತಿಯನ್ನೇ ನೀಡಲ್ಲ ಎಂದರೆ ಅವರಿಗೆ ನೀರು, ಕರೆಂಟ್ ಕಟ್ ಮಾಡಿದರೆ ಹೇಗೆ? ಅವರು‌ ಸಮೀಕ್ಷೆಯಲ್ಲಿ ಭಾಗವಹಿಸಲ್ಲ‌ ಅಂದ್ರೆ ನೀರು, ಕರೆಂಟ್ ಏಕೆ ಬೇಕು? ಈಗಾಗಲೇ ಬಿಬಿಎಂಪಿಗೆ ಸೂಚನೆ ಕೊಟ್ಟಿದ್ದೇವೆ.

ಸಮೀಕ್ಷೆ ಸಹಕರಿಸಲು ಎಚ್ಚರಿಕೆ ಕೊಡುವಂತೆ ಲಿಖಿತವಾಗಿ ಬಿಬಿಎಂಪಿಗೆ ಸೂಚಿಸಿದ್ದೇವೆ. ಬಿಬಿಎಂಪಿ ವ್ಯಾಪ್ತಿಯಲ್ಲಿ ಕಂಟ್ರೋಲ್‌ ರೂಂ ತೆರೆಯಲು‌ ಸಹ ಸೂಚಿಸಿದ್ದೇವೆ. ಖಾಸಗಿ ಶಾಲೆಯ ಶಿಕ್ಷಕರನ್ನ ಸಮೀಕ್ಷೆಗೆ ನೇಮಿಸಲು ಸೂಚಿಸಿದ್ದೇವೆ ಎಂದು ತಿಳಿಸಿದ್ದಾರೆ.


Spread the love

LEAVE A REPLY

Please enter your comment!
Please enter your name here