ಬೆಂಗಳೂರು:- ಹೃದಯಾಘಾತದಿಂದ ಕರ್ತವ್ಯ ನಿರತ ASI ಸಾವನ್ನಪ್ಪಿದ ಘಟನೆ ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಜರುಗಿದೆ.
Advertisement
ಬೆಂಗಳೂರು ನಗರದ ಕಾಮಾಕ್ಷಿಪಾಳ್ಯ ಠಾಣೆಯ ಎಎಸ್ಐ ಶಿವಶಂಕರ್ ಚಾರಿ ಹೃದಯಾಘಾತದಿಂದ ಮೃತಪಟ್ಟಿದ್ದಾರೆ. ನಿನ್ನೆ ಬೆಳಗ್ಗೆ ಎಂದಿನಂತೆ ಶಿವಶಂಕರ್ ಕರ್ತವ್ಯಕ್ಕೆ ಹಾಜರಾಗಿದ್ದರು. ಆದರೆ ರೌಂಡ್ಸ್ಗೆಂದು ತೆರಳುವ ಸಂದರ್ಭ ಉಸಿರಾಟದ ತೊಂದರೆ ಕಾಣಿಸಿಕೊಂಡಿದೆ.
ತಕ್ಷಣವೇ ಶಿವಶಂಕರ್ ಚಾರಿ ಅವರನ್ನು ಸ್ಥಳೀಯ ಆಸ್ಪತ್ರೆಗೆ ಕರೆದೊಯ್ಯಲಾಯಿತು. ಆದರೆ ಹೃದಯಾಘಾತದಿಂದ ಶಿವಶಂಕರ್ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ. ಶಿವಶಂಕರ್ ಚಾರಿ 1999ರಲ್ಲಿ ಪೊಲೀಸ್ ಇಲಾಖೆಗೆ ಸೇರಿದ್ದರು ಎನ್ನಲಾಗಿದೆ.