Bengaluru Crime News: ಶೀಲ ಶಂಕಿಸಿ ಪತಿಯಿಂದಲೇ ಪತ್ನಿ ಹತ್ಯೆ – ಆರೋಪಿ ಅರೆಸ್ಟ್‌

0
Spread the love

ಬೆಂಗಳೂರು:- ಸಿಲಿಕಾನ್ ಸಿಟಿ ಬೆಂಗಳೂರಿನ ಅಮೃತಹಳ್ಳಿಯ ಗಂಗಮ್ಮ ಲೇಔಟ್‌ನಲ್ಲಿ ಶೀಲ ಶಂಕಿಸಿ ಪತಿಯೇ ಪತ್ನಿಯನ್ನು ಹತ್ಯೆಗೈದಿರುವ ಘಟನೆ ಜರುಗಿದೆ.

Advertisement

ಅಂಜಲಿ (20) ಕೊಲೆಯಾದ ಮಹಿಳೆ. ಆಕೆಯ ಪತಿ ರವಿಚಂದ್ರ ಕೊಲೆಗೈದ ಆರೋಪಿಯಾಗಿದ್ದಾನೆ. ಅಂಜಲಿ ತರಕಾರಿ ಅಂಗಡಿಯಲ್ಲಿ ಕೆಲಸ ಮಾಡಿಕೊಂಡಿದ್ದರು. ಆರೋಪಿ ಟ್ರಾವೆಲ್ಸ್ ಕಚೇರಿಯಲ್ಲಿ ಡ್ರೈವರ್ ಆಗಿ ಕೆಲಸ ಮಾಡುತ್ತಿದ್ದ ಎಂದು ತಿಳಿದುಬಂದಿದೆ. ಅಂಜಲಿ ಸುರಪುರ ಮೂಲದ ರವಿಚಂದ್ರನ ಜೊತೆ ಮಹಿಳೆ 2ನೇ ಮದುವೆಯಾಗಿದ್ದಳು. ಮದುವೆ ನಂತರ ಅಮೃತಹಳ್ಳಿಯಲ್ಲಿ ವಾಸವಿದ್ದರು. ಈ ಸಂಬಂಧ ಅಮೃತಹಳ್ಳಿ ಪೊಲೀಸ್ ಠಾಣೆಯಲ್ಲಿ ಕೊಲೆ ಪ್ರಕರಣ ದಾಖಲಾಗಿದೆ.

ಪೊಲೀಸರು ಆರೋಪಿ ರವಿಚಂದ್ರನನ್ನು ಬಂಧಿಸಿ ಹೆಚ್ಚಿನ ವಿಚಾರಣೆ ನಡೆಸುತ್ತಿದ್ದಾರೆ.


Spread the love

LEAVE A REPLY

Please enter your comment!
Please enter your name here