ಬೆಂಗಳೂರು: ಮಾರಕಾಸ್ತ್ರಗಳಿಂದ ಕೊಚ್ಚಿ ರೌಡಿಶೀಟರ್ ಹತ್ಯೆ

0
Spread the love

ಬೆಂಗಳೂರು: ಟೀ ಕುಡಿಯಲು ಬೇಕರಿ ಬಳಿ ಬಂದಿದ್ದ ರೌಡಿಶೀಟರ್‌ ಬರ್ಬರವಾಗಿ ಹತ್ಯೆಯಾಗಿರುವ ಘಟನೆ ಬೆಂಗಳೂರಿನ ಚುಂಚನಘಟ್ಟ ಮುಖ್ಯರಸ್ತೆಯಲ್ಲಿ ನಡೆದಿದೆ.

Advertisement

ಸಹದೇವ್ ಕೊಲೆಯಾದ ರೌಡಿಶೀಟರ್. ರಾತ್ರಿ 9:30 ರ ಸುಮಾರಿಗೆ ಸಹದೇವ್‌ ಹತ್ಯೆಯಾಗಿದೆ. ಈತ ಕೋಣನಕುಂಟೆ ಠಾಣೆ ವ್ಯಾಪ್ತಿಯ ರೌಡಿಶೀಟರ್‌ ಆಗಿದ್ದ. ಪುಟ್ಟೇನಹಳ್ಳಿ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಟೀ ಕುಡಿಯಲು ಬೇಕರಿ ಬಳಿ ರೌಡಿಶೀಟರ್‌ ಸಹದೇವ್‌ ಬಂದಿದ್ದ. ಈ ವೇಳೆ ಮೂರು ಬೈಕ್‌ನಲ್ಲಿ ಬಂದಿದ್ದ ಆರು ಮಂದಿ ದಾಳಿ ನಡೆಸಿದ್ದಾರೆ. ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಿ ಕ್ಷಣಾರ್ಧದಲ್ಲಿ ಬೈಕ್‌ನಲ್ಲಿ ಪರಾರಿಯಾಗಿದ್ದಾರೆ.

ಘಟನಾ ಸ್ಥಳಕ್ಕೆ ಪುಟ್ಟೇನಹಳ್ಳಿ ಪೊಲೀಸರ ಭೇಟಿ ಪರಿಶೀಲನೆ ನಡೆಸಿದ್ದಾರೆ. ಆರೋಪಿಗಳ ಪತ್ತೆಗೆ ಬಲೆ ಬೀಸಿದ್ದಾರೆ.


Spread the love

LEAVE A REPLY

Please enter your comment!
Please enter your name here