ಧಾರಾಕಾರ ಮಳೆಗೆ ತತ್ತರಿಸಿದ ಬೆಂಗಳೂರು: ಸಚಿವ ಡಾ.ಜಿ‌.ಪರಮೇಶ್ವರ್ ಹೇಳಿದ್ದೇನು..?

0
Spread the love

ಬೆಂಗಳೂರು: ಬೆಂಗಳೂರು ನಗರದಾದ್ಯಂತ ಭಾನುವಾರ ರಾತ್ರಿ ಸುರಿದ ಭಾರಿ ಮಳೆ ಅನೇಕ ಅವಾಂತರಗಳನ್ನು ಸೃಷ್ಟಿಸಿದೆ. ಇನ್ನೂ ಈ ವಿಚಾರಕ್ಕೆ ಸಂಬಂಧಿಸಿದಂತೆ ಗೃಹ ಸಚಿವ ಡಾ.ಜಿ‌.ಪರಮೇಶ್ವರ್ ಪ್ರತಿಕ್ರಿಯೇ ನೀಡಿದ್ದಾರೆ. ಸದಾಶಿವನಗರದಲ್ಲಿ ಮಾತನಾಡಿದ ಅವರು, ಮಳೆಯಿಂದ ತುಂಬಾ ತೊಂದರೆಯಾಗಿದೆ. ಸಿಲ್ಕ್​​ ಬೋರ್ಡ್​ನಲ್ಲಿ ನೀರು ನುಗ್ಗಿದೆ. ಬೇರೆ ಕಡೆಗಳಲ್ಲೂ ನೀರು ನುಗ್ಗಿದೆ.

Advertisement

ಇದರಿಂದ ಟ್ರಾಫಿಕ್​ಗೆ ತೊಂದರೆ ಅಂತಿದ್ದಾರೆ. ಡಿಸಿಎಂ ಡಿಕೆಶಿ ಹೊಸಪೇಟೆಯಲ್ಲಿದ್ದಾರೆ. ಅವರು ಸೂಚನೆ ಕೊಟ್ಟಿದ್ದಾರೆ ಅಂತ ಕೇಳಿದ್ದೇನೆ. ವಲಯವಾರು ಜಂಟಿ ಆಯುಕ್ತರು ಇರುತ್ತಾರೆ. ಅವರು ಕ್ರಮ ವಹಿಸುತ್ತಾರೆ ಎಂದು ಹೇಳಿದರು.

ಇನ್ನೂ ಬಿಬಿಎಂಪಿ ಮುಂಜಾಗ್ರತಾ ಕ್ರಮ ಕೈಗೊಳ್ಳಬೇಕಿತ್ತು. ವೈಟ್ ಟಾಪಿಂಗ್, ಕೇಬಲ್ ವೈರ್ ಕಾಮಗಾರಿ ನಡೆಯುತ್ತಿದೆ. ಮಳೆಗಾಲ ಹತ್ತಿರ ಬರುತ್ತಿದೆ. ಹೀಗಾಗಿ ಜಾಗ್ರತೆ ವಹಿಸಬೇಕಿತ್ತು ಎಂದು ಬಿಬಿಎಂಪಿ ಅಧಿಕಾರಿಗಳ ವಿರುದ್ಧ ಬೇಸರ ವ್ಯಕ್ತಪಡಿಸಿದ್ದಾರೆ.


Spread the love

LEAVE A REPLY

Please enter your comment!
Please enter your name here