ನಿಷ್ಪಕ್ಷಪಾತ ತನಿಖೆ ನಡೆದು ಅಗಲಿದ SDA ಕುಟುಂಬಕ್ಕೆ ನ್ಯಾಯ ಸಿಗಬೇಕು: ಲಕ್ಷ್ಮಿ ಹೆಬ್ಬಾಳ್ಕರ್

0
Spread the love

ಬೆಳಗಾವಿ: ತಹಶೀಲ್ದಾರ್ ಕಚೇರಿಯಲ್ಲಿ ಎಸ್ ಡಿಎ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ  ನಿಷ್ಪಕ್ಷಪಾತ ತನಿಖೆ ನಡೆದು ಅಗಲಿದ ಎಸ್​ಡಿಎ ಕುಟುಂಬಕ್ಕೆ ನ್ಯಾಯ ಸಿಗಬೇಕು ಎಂದು ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಹೇಳಿದ್ದಾರೆ. ನಗರದಲ್ಲಿಂದು ಮಾಧ್ಯಮಗಳ ಜೊತೆಗೆ ಮಾತನಾಡಿದ ಅವರು,

Advertisement

ಇಂಥ ಘಟನೆಗಳು ನಡೆಯಬಾರದು, ಮಂಗಳವಾರ ಬಹಳ ಬ್ಯೂಸಿಯಾಗಿದ್ದ ಕಾರಣ ವಿಷಯದ ಬಗ್ಗೆ ತನ್ನಲ್ಲಿ ಮಾಹಿತಿ ಇಲ್ಲ, ಆದರೆ ಎಸ್​ಡಿಎ ಅವರ ಕುಟುಂಬಕ್ಕೆ ನ್ಯಾಯ ಸಿಗಬೇಕು, ನಿಷ್ಪಕ್ಷಪಾತ ತನಿಖೆ ನಡೆದು ಸತ್ಯ ಹೊರಬರಬೇಕು ಎಂದು ಹೇಳಿದರು.

ಇನ್ನೂ ನಾನ್ಯಾವತ್ತೂ ರುದ್ರಣ್ಣನನ್ನು ಭೇಟಿಯಾಗಿಲ್ಲ. ಯಾವುದೇ ಕೆಲಸಕ್ಕೂ ಸಂಪರ್ಕ ಮಾಡಿಲ್ಲ. ಪ್ರಾಥಮಿಕ ತನಿಖೆ ಆರಂಭವಾಗಿದೆ. ಮಂತ್ರಿ ಎಂದ ಮೇಲೆ 10-15 ಜನ ಆಪ್ತ ಸಹಾಯಕರು ಇರುವುದು ಸ್ವಾಭಾವಿಕ. ಕ್ಷೇತ್ರದ ಕೆಲಸ, ಇತರೆ ಕೆಲಸಗಳಿಗೆ ಪಿಎಗಳನ್ನು ನೇಮಕ ಮಾಡಿಕೊಂಡಿರುತ್ತೇವೆ. ಸದ್ಯ ಪ್ರಕರಣದ ತನಿಖೆ ನಡೆಯುತ್ತಿದೆ. ನಾನೇನೂ ಹೆಚ್ಚಿಗೆ ಹೇಳೋದಿಲ್ಲಎಂದರು.


Spread the love

LEAVE A REPLY

Please enter your comment!
Please enter your name here