HomeKarnataka Newsಭಗವದ್ಗೀತೆಯನ್ನು ಪಠ್ಯದಲ್ಲಿ ಸೇರಿಸಬೇಕು: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್‌ಗೆ ಹೆಚ್‌ಡಿಕೆ ಪತ್ರ

ಭಗವದ್ಗೀತೆಯನ್ನು ಪಠ್ಯದಲ್ಲಿ ಸೇರಿಸಬೇಕು: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್‌ಗೆ ಹೆಚ್‌ಡಿಕೆ ಪತ್ರ

For Dai;y Updates Join Our whatsapp Group

Spread the love

ನವದೆಹಲಿ:- ಭಗವದ್ಗೀತೆಯನ್ನು ವಿದ್ಯಾರ್ಥಿಗಳಿಗೆ ಬೋಧಿಸಲು ಪಠ್ಯದಲ್ಲಿ ಸೇರಿಸಬೇಕು ಎಂದು ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಅವರು ಕೇಂದ್ರದ ಶಿಕ್ಷಣ ಮಂತ್ರಿ ಧರ್ಮೇಂದ್ರ ಪ್ರಧಾನ್ ಅವರಿಗೆ ಮನವಿ ಮಾಡಿದ್ದಾರೆ.

ಈ ಬಗ್ಗೆ ಕೇಂದ್ರ ಶಿಕ್ಷಣ ಸಚಿವರಿಗೆ ಪತ್ರ ಬರೆದಿರುವ ಅವರು, ಮೌಲ್ಯಾಧಾರಿತ ಶಿಕ್ಷಣಕ್ಕೆ ಬಲವಾದ ಒತ್ತು ನೀಡುವ ನಿಟ್ಟಿನಲ್ಲಿ ಭಗವದ್ಗೀತೆ ಬೋಧನೆ ಅತ್ಯಗತ್ಯವಾಗಿದೆ. ಭಾರತವು ಬಹಳ ಹಿಂದಿನಿಂದಲೂ ಸಂತರು, ಜ್ಞಾನ ಮತ್ತು ಶಾಶ್ವತ ನಾಗರಿಕ ಮೌಲ್ಯಗಳ ನಾಡು. ಸನಾತನ ಧರ್ಮವು ವಸುದೈವ ಕುಟುಂಬ ಎಂಬ ಸಾರ್ವತ್ರಿಕ ಆದರ್ಶವನ್ನು ಎತ್ತಿಹಿಡಿಯುತ್ತದೆ. ಶ್ರೀಕೃಷ್ಣನು ಅರ್ಜುನನಿಗೆ ಬೋಧಿಸಿದ ಭಗವದ್ಗೀತೆಯು ಪರಮ ಜ್ಞಾನವಾಗಿದ್ದು, ಇದು ನಿಷ್ಕಾಮ ಕರ್ಮ ಮತ್ತು ಪ್ರಾಮಾಣಿಕತೆ ಹಾಗೂ ಸಮರ್ಪಣೆಯೊಂದಿಗೆ ಪ್ರತಿಯೊಬ್ಬರ ಕರ್ತವ್ಯವನ್ನು ನಿರ್ವಹಿಸುವ ಮಹತ್ವವನ್ನು ಒತ್ತಿ ಹೇಳುತ್ತದೆ. ಈ ಮೌಲ್ಯಗಳು ವಿಶೇಷವಾಗಿ ಪ್ರಸ್ತುತ ಜಾಗತಿಕ ಪರಿಸರದಲ್ಲಿ ಅಪಾರ ಪ್ರಸ್ತುತತೆಯನ್ನು ಹೊಂದಿವೆ ಎಂದು ಹೆಚ್‌ಡಿಕೆ ಪ್ರತಿಪಾದಿಸಿದ್ದಾರೆ.

ಇತ್ತೀಚೆಗೆ ಪ್ರಧಾನ ಮಂತ್ರಿಗಳು ಉಡುಪಿಯ ಶ್ರೀಕೃಷ್ಣ ಮಠಕ್ಕೆ ಭೇಟಿ ನೀಡಿದ್ದ ಸಂದರ್ಭದಲ್ಲಿ ಗೀತಾ ಪಠಣ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು. ಅಲ್ಲಿ ಅವರು ಹಿಂದೂ ಧರ್ಮದ ಮೂಲ ತತ್ವಗಳನ್ನು ಎತ್ತಿಹಿಡಿದು ವಸುದೈವ ಕುಟುಂಬ ಪರಿಕಲ್ಪನೆಯ ಬಗ್ಗೆ ಒತ್ತಿ ಹೇಳಿದರು. ಆ ಪವಿತ್ರ ಗ್ರಂಥ ಹೊಂದಿರುವ ಕಾಲಾತೀತ ಮೌಲ್ಯಗಳನ್ನು ಪುನರುಚ್ಚರಿಸಿದರು ಎಂಬುದನ್ನು ಶಿಕ್ಷಣ ಸಚಿವರಿಗೆ ಬರೆದಿರುವ ಪತ್ರದಲ್ಲಿ ಉಲ್ಲೇಖಿಸಿದ್ದಾರೆ.

ಇದಲ್ಲದೆ, ಶಿವಮೊಗ್ಗದಲ್ಲಿ ನಡೆದ ಗೀತಾ ಪಠಣ ಕಾರ್ಯಕ್ರಮಕ್ಕೆ ಹಾಜರಾಗುವ ಸೌಭಾಗ್ಯ ನನಗೂ ಸಿಕ್ಕಿತ್ತು. ಅದೊಂದು ಸ್ಫೂರ್ತಿದಾಯಕ ಕಾರ್ಯಕ್ರಮವಾಗಿತ್ತು. ಗೀತೆಯನ್ನು ಪಠಿಸಲು ಮತ್ತು ಅದಕ್ಕೆ ಸಂಬಂಧಿಸಿದ ಆಳವಾದ ಶಕ್ತಿ ಮತ್ತು ಭಕ್ತಿಯನ್ನು ಅನುಭವಿಸಲು ಇದು ಅದ್ಭುತ ಅವಕಾಶವನ್ನು ನೀಡಿತು. ಹಲವಾರು ಸ್ಥಳೀಯ ನಾಯಕರು ಮತ್ತು ಪೋಷಕರು ಭಗವದ್ಗೀತೆಯ ಬೋಧನೆಗಳನ್ನು ಶಾಲಾ ಪಠ್ಯಕ್ರಮದಲ್ಲಿ ಸೇರಿಸಬೇಕೆಂದು ವಿನಂತಿಸಿದರು ಎಂಬ ಅಂಶದ ಬಗ್ಗೆ ಸಚಿವರ ಗಮನಕ್ಕೆ ತಂದಿದ್ದಾರೆ.

ಭಗವದ್ಗೀತೆಯ ಕಾಲಾತೀತ ಮೌಲ್ಯಗಳನ್ನು ದೇಶಾದ್ಯಂತ ವಿದ್ಯಾರ್ಥಿಗಳ ಕಲಿಕೆಯ ಚೌಕಟ್ಟಿನಲ್ಲಿ ಅರ್ಥಪೂರ್ಣವಾಗಿ ಸಂಯೋಜಿಸಲು ಈ ಪ್ರಸ್ತಾವನೆಗೆ ಸರಿಯಾದ ಪರಿಗಣನೆಯನ್ನು ನೀಡಿ ಸೂಕ್ತ ನಿರ್ದೇಶನಗಳನ್ನು ನೀಡಬೇಕೆಂದು ಶಿಕ್ಷಣ ಸಚಿವರನ್ನು ಕುಮಾರಸ್ವಾಮಿ ಅವರು ಕೋರಿದ್ದಾರೆ.


Spread the love
Vijaya Sakshi
Vijaya Sakshi
Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

LEAVE A REPLY

Please enter your comment!
Please enter your name here

E-Paper

E-paper

Must Read

spot_img
error: Content is protected !!