ಹೆಚ್ಚು ಮತಗಳ ಅಂತರದಿಂದ ಭರತ್ ಗೆಲ್ಲುತ್ತಾನೆ: ಬಸವರಾಜ ಬೊಮ್ಮಾಯಿ ವಿಶ್ವಾಸ

0
Spread the love

ಹಾವೇರಿ : ಹೆಚ್ಚು ಮತಗಳ ಅಂತರದಿಂದ ಭರತ್ ಗೆಲ್ಲುತ್ತಾನೆ ಎಂದು ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಹಾವೇರಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ನಾಯಕರ ಭಾಷಣ ಸುಳ್ಳಿನ ಕಂತೆ ಅಷ್ಟೆ.

Advertisement

ನಾವು ಎಲ್ಲರೂ ಒಗ್ಗಟ್ಟಿನಲ್ಲಿದ್ದೇವೆ. ನನಗಿಂತ ಹೆಚ್ಚು ಬೆಂಬಲ ಭರತ್‌ಗೆ ಸಿಕ್ಕಿದೆ. ದೊಡ್ಡ ಪ್ರಮಾಣದಲ್ಲಿ ಎಲ್ಲಾ ಸಮುದಾಯದವರು ಭರತ್‌ಗೆ ಬೆಂಬಲ ವ್ಯಕ್ತಪಡಿಸ್ತಿದ್ದಾರೆ. ಹೆಚ್ಚು ಮತಗಳ ಅಂತರದಿಂದ ಭರತ್ ಗೆಲ್ಲುತ್ತಾನೆ. ಖಾದ್ರಿ ಮನವೊಲಿಕೆ ಆದರೆ ಅದು ನಮಗೇನೂ ಪರಿಣಾಮ ಬೀರಲ್ಲ ಎಂದು ಹೇಳಿದರು.

ಇನ್ನೂ ಯಾವ ಗ್ಯಾರಂಟಿನೂ ಕೈ ಹಿಡಿದಿಲ್ಲ, ಏನೂ ಹಿಡಿದಿಲ್ಲ. ನಾನು ಹೆಚ್ಚಿನ ಸಮಯ ಹಾವೇರಿ ಗದಗ ಲೋಕಸಭಾ ಕ್ಷೇತ್ರದಲ್ಲಿ ಇದ್ದ ಕಾರಣ ಲೋಕಸಭಾ ಚುನಾವಣೆ ಸಂದರ್ಭದಲ್ಲಿ ಶಿಗ್ಗಾಂವಿ ಕ್ಷೇತ್ರದಲ್ಲಿ ಸ್ವಲ್ಪ ಹೆಚ್ಚು ಕಡಿಮೆ ಆಗಿದೆ. ಈ ಎಲ್ಲಾ ವಿಚಾರ ನಮ್ಮ ಕಾರ್ಯಕರ್ತರಿಗೆ ಮನದಟ್ಟಾಗಿದೆ. ಕ್ಷೇತ್ರದಲ್ಲಿ 2023ರ ವಿಧಾನಸಭಾ ಚುನಾವಣೆ ವಾತಾವರಣ ಇದೆ. ಕಾಂಗ್ರೆಸ್‌ನವರು ಕನಸು ಕಾಣುತ್ತಿದ್ದಾರೆ. ಅವರ ಕನಸು ನನಸಾಗಲ್ಲ ಎಂದರು.


Spread the love

LEAVE A REPLY

Please enter your comment!
Please enter your name here