ಇನ್ಸ್ಟಾ ಸುಂದರಿ ನಂಬಿ 25 ಲಕ್ಷ ಕೊಟ್ಟ ಭೂಪ: ವಂಚನೆ ತಿಳಿದು ದೂರು ಕೊಡಲು ಹೋದ್ರೆ.. ಮುಂದೆ ನಡೆದಿದ್ದೇನು?

0
Spread the love

ಗದಗ:- ಇತ್ತೀಚಿನ ದಿನಗಳಲ್ಲಿ ಸೋಷಿಯಲ್ ಮೀಡಿಯಾ ಎಲ್ಲರೂ ಬಳಸುತ್ತಾರೆ. ಒಂದು ಪಕ್ಷ ಊಟ ಬಿಟ್ಟರೂ ಫೋನ್ ಬಿಡುವುದಿಲ್ಲ. ಅಷ್ಟರ ಮಟ್ಟಿಗೆ ಇಂದಿನ ಯುವ ಸಮೂಹ ಮೊಬೈಲ್ ಗೆ ಅಡಿಕ್ಟ್ ಆಗಿದೆ. ಅದರಲ್ಲೂ ಇನ್​ಸ್ಟಾಗ್ರಾಂ.. ಈ ಆ್ಯಪ್ ಬಳಸದವರೇ ಇಲ್ಲ..

Advertisement

ಇದೀಗ ಇದೇ ಆ್ಯಪ್ ನಲ್ಲಿ ಪರಿಚಯವಾದ ಸುಂದರಿ ನಂಬಿ ವ್ಯಕ್ತಿಯೋರ್ವ ಬರೋಬ್ಬರಿ 25 ಲಕ್ಷ ಕಳೆದುಕೊಂಡಿರುವ ಘಟನೆ ಗದಗದಲ್ಲಿ ಜರುಗಿದೆ. ಈ ವಿಚಾರವಾಗಿ ದೂರು ನೀಡಲು ಹೋದ ವ್ಯಕ್ತಿಗೆ ರೋಣ ಸಿಪಿಐ ಬೆದರಿಕೆ ಹಾಕಿ 15 ಲಕ್ಷ ರೂ ಬೇಡಿಕೆ ಇಟ್ಟಿರುವ ಆರೋಪ ಕೇಳಿಬಂದಿದೆ. ಜಿಲ್ಲೆಯ ರೋಣ ಸಿಪಿಐ ಸಿದ್ದಪ್ಪ ಬೀಳಗಿ ವಿರುದ್ಧ ಗಜೇಂದ್ರಗಡದ ರಾಘವೇಂದ್ರ ರಾಠೋಡ ಎಂಬಾತ ಗಂಭೀರ ಆರೋಪ ಮಾಡಿದ್ದಾರೆ. ಈಗಾಗಲೇ ಹೆದರಿಸಿ 3 ಲಕ್ಷ ರೂ. ಹಣ ವಸೂಲಿ‌ ಮಾಡಿದ್ದು, ಉಳಿದ ಹಣಕ್ಕಾಗಿ ನಿತ್ಯ ಕಿರುಕುಳ ನೀಡುತ್ತಿದ್ದಾರೆ. ಈ ಬಗ್ಗೆ SP ಕಚೇರಿಗೆ ಲಿಖಿತ ದೂರು ನೀಡಿದರೂ ಕ್ರಮ ಕೈಗೊಂಡಿಲ್ಲವೆಂದು ಆರೋಪಿಸಿದ್ದಾರೆ.

ಸಾಮಾಜಿಕ ಜಾಲತಾಣಗಳಲ್ಲಿ ಒಂದಾದ ಇನ್​ಸ್ಟಾಗ್ರಾಂನಲ್ಲಿ ಸಂತ್ರಸ್ತ ರಾಘವೇಂದ್ರ ರಾಠೋಡಗೆ ಯುವತಿ ಪರಿಚಯವಾಗಿದ್ದಾಳೆ. ದಿನಕಳೆದಂತೆ ಪರಿಚಯ ಬಳಿಕ ಪ್ರೀತಿಗೆ ತಿರುಗಿತ್ತು. ಬಳಿಕ ಕಷ್ಟ ಹೇಳಿಕೊಂಡ ಯುವತಿಗೆ ರಾಘವೇಂದ್ರ ಹಂತ ಹಂತವಾಗಿ ಬರೋಬ್ಬರಿ 25 ಲಕ್ಷ ರೂ ನೀಡಿದ್ದಾರೆ. ಬಳಿಕ ಹಣ ವಾಪಸ್ ಕೇಳಿದರೆ ಯುವತಿ ನೀಡಿಲ್ಲ. ಹೀಗಾಗಿ ರಾಘವೇಂದ್ರ ಆತ್ಮಹತ್ಯೆ ಯತ್ನಿಸಿದ್ದರು.

ಇನ್ನು ಹಣ ಪಡೆದ ಯುವತಿ ಸಿಪಿಐ ಸಿದ್ದಪ್ಪ ಬೀಳಗಿ ಸಂಬಂಧಿ ಎಂದು ತಿಳಿದು ಬಂದಿದೆ. ಹೀಗಾಗಿ ಈ ವಿಚಾರಕ್ಕೆ ದೂರು ನೀಡಲು ಬಂದ ರಾಘವೇಂದ್ರಗೆ ಸಿಪಿಐನಿಂದ ಬೆದರಿಕೆ ಹಾಕಿ, ಹಲ್ಲೆ ಮಾಡಿದ್ದಾರೆ. ನನ್ನ ಮೇಲೆ ಹಲ್ಲೆ ಮಾಡಿದ ದೃಶ್ಯ ಠಾಣೆಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಮಾಹಿತಿ ಹಕ್ಕಿನಡಿ ಸಿಸಿಟಿವಿ ದೃಶ್ಯಗಳು ನೀಡುವಂತೆ ಕೇಳಿದ್ದೇನೆ ಎಂದಿದ್ದಾರೆ. ಆಗ ನಿನ್ನ ಮೇಲೆ ರೇಪ್ ಕೇಸ್ ಹಾಕಿಸ್ತಿನಿ ಅಂತ ಸಿಪಿಪಿ ಬೆದರಿಕೆ ಹಾಕಿರುವುದಾಗಿ ಆರೋಪಿಸಿದ್ದಾರೆ.

ಘಟನೆ ಕುರಿತು ಎಸ್​​ಪಿ ಬಿಎಸ್ ನೇಮಗೌಡ ಹೇಳಿದ್ದೇನು?

ಘಟನೆಗೆ ಸಂಬಂಧಿಸಿದಂತೆ ಎಸ್​​ಪಿ ಬಿಎಸ್ ನೇಮಗೌಡ ಪ್ರತಿಕ್ರಿಯೆ ನೀಡಿದ್ದು, ಈ ವಿಷಯದ ಬಗ್ಗೆ ಮಾಹಿತಿ ಪಡೆಯಲಾಗಿದೆ. ಬೆದರಿಕೆ, ಲಂಚ ಪಡೆದಿರುವ ಆರೋಪ ಸುಳ್ಳು. ಆ ಮಹಿಳೆಗೆ ನೀಡಿದ ಹಣ ಕೊಡಿಸುವಂತೆ ನಮ್ಮ ಅಧಿಕಾರಿಗಳಿಗೆ ದುಂಬಾಲು ಬಿದ್ದಿದ್ದ. ಹಣ ಕೊಡಿಸದ ಕಾರಣ ಅಧಿಕಾರಿಗಳ ವಿರುದ್ಧ ಆರೋಪ ಮಾಡುತ್ತಿದ್ದಾನೆ. ಈ ಬಗ್ಗೆ ನರಗುಂದ ಡಿವೈಎಸ್​​ಪಿ ನೇತೃತ್ವದಲ್ಲಿ ತನಿಖೆ ಮಾಡಿಸುತ್ತೇನೆ. ಒಂದು ವೇಳೆ ಸಿಪಿಐ ಬೆದರಿಕೆ ಹಾಕಿ, ಲಂಚ ಪಡೆದಿದ್ದರೆ ಕ್ರಮ ಕೈಗೊಳ್ಳಲಾಗುವುದು ಎಂದಿದ್ದಾರೆ.


Spread the love

LEAVE A REPLY

Please enter your comment!
Please enter your name here