ಕಾಂತಾರ 2 ಚಿತ್ರತಂಡಕ್ಕೆ ಬಿಗ್ ರಿಲೀಫ್: ಅರಣ್ಯ ನಾಶ ಆರೋಪಕ್ಕೆ ಅಧಿಕಾರಿಗಳಿಂದ ಕ್ಲೀನ್ ಚಿಟ್

0
Spread the love

ರಿಷಬ್ ಶೆಟ್ಟಿ ನಿರ್ದೇಶಿಸಿ, ನಟಿಸತ್ತಿರುವ ಬಹುನಿರೀಕ್ಷಿತ ಕಾಂತಾರ 2 ಚಿತ್ರದ ಚಿತ್ರೀಕರಣಕ್ಕೆ ಚಿತ್ರ ತಂಡ ಮರಗಳನ್ನು ಕಡಿದಿದೆ ಎಂಬ ಆರೋಪ ಕೇಳಿ ಬಂದಿತ್ತು. ಇದೀಗ ಪ್ರಕರಣಕ್ಕೆ ಸಂಬಂಧಿಸಿದಂತೆ ಚಿತ್ರತಂಡಕ್ಕೆ ಕ್ಲೀನ್ ಚಿಟ್ ಸಿಕ್ಕಿದೆ.

Advertisement

ಕಾಂತಾರಾ 2 ಚಿತ್ರೀಕರಣದ ವೇಳೆ ಅರಣ್ಯ ನಾಶ ಆರೋಪಕ್ಕೆ ಸಂಬಂಧಿಸಿದಂತೆ ಸಕಲೇಶಪುರ ಎಸಿಎಫ್ ಹಾಗೂ ಯಸಳೂರು ಆರ್‍ಎಫ್‍ಓ ಚಿತ್ರೀಕರಣದ ಸ್ಥಳ ಪರಿಶೀಲನೆ ನಡೆಸಿ ವರದಿ ನೀಡಿದೆ. ಚಿತ್ರೀಕರಣದ ವೇಳೆ ಯಾವುದೇ ನಿಯಮ ಉಲ್ಲಂಘನೆ ಆಗಿಲ್ಲ. ಯಾವುದೇ ಸ್ಫೋಟ ಮಾಡಿಲ್ಲ, ಡೀಮ್ಡ್ ಅರಣ್ಯ ಪ್ರದೇಶದಲ್ಲಿ ಮರಗಳನ್ನು ಕಡಿದಿಲ್ಲ ಎಂದು ವರದಿಯಲ್ಲಿ ಉಲ್ಲೇಖಿಸಲಾಗಿದೆ.

ಹಾಸನ ಜಿಲ್ಲೆಯ ಸಕಲೇಶಪುರ ತಾಲ್ಲೂಕಿನ ಹೇರೂರು ಗ್ರಾಮದ ಸಮೀಪ‌ ಇರುವ ಗವಿಗುಡ್ಡ ಪ್ರದೇಶದ ಡೀಮ್ಡ್ ಅರಣ್ಯ ಹಾಗು ಗೋಮಾಳ ಜಮೀನಿನಲ್ಲಿ ಚಿತ್ರೀಕರಣ ಮಾಡಲು ಕಾಂತಾರ ತಂಡ ಅನುಮತಿ ಪಡೆದಿಕೊಂಡಿತ್ತು. ತಂಡದವರು ಅಕ್ರಮವಾಗಿ ಮರ‌ಕಡಿದು, ಸ್ಫೋಟಕ ಬಳಸಿ, ನಿಯಮ ಉಲ್ಲಂಘನೆ ಮಾಡಿದ್ದಾರೆ ಎಂದು ಕೆಲ ಸ್ಥಳೀಯರ ಆರೋಪ ಮಾಡಿದ್ದರು.


Spread the love

LEAVE A REPLY

Please enter your comment!
Please enter your name here