ಸಚಿವ ಜಮೀರ್ ಗೆ ಬಿಗ್ ರಿಲೀಫ್: ಚುನಾವಣಾ ನೀತಿ ಸಂಹಿತೆ ಪ್ರಕರಣಕ್ಕೆ ಹೈಕೋರ್ಟ್ ತಡೆ!

0
Spread the love

ಬೆಂಗಳೂರು:- ಸಚಿವ ಜಮೀರ್ ಗೆ ಬಿಗ್ ರಿಲೀಫ್ ಸಿಕ್ಕಿದ್ದು, ಚುನಾವಣಾ ನೀತಿ ಸಂಹಿತೆ ಪ್ರಕರಣಕ್ಕೆ ಹೈಕೋರ್ಟ್ ತಡೆಯಾಜ್ಞೆ ನೀಡಿದೆ.

Advertisement

ಚುನಾವಣಾ ನೀತಿ ಸಂಹಿತೆ ಉಲ್ಲಂಘನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಚಿವ ಜಮೀರ್ ಅಹ್ಮದ್ ಖಾನ್ ವಿರುದ್ಧದ ಕೇಸ್​ಗೆ ಹೈಕೋರ್ಟ್ ಏಕಸದಸ್ಯ ಪೀಠ ಮಧ್ಯಂತರ ಆದೇಶ ಹೊರಡಿಸಿದೆ. ಇನ್ನು ಕಳೆದ ಚುನಾವಣೆಯಲ್ಲಿ ನೀತಿ ಸಂಹಿತೆ ಉಲ್ಲಂಘಿಸಿದ್ದಾರೆ ಎಂದು ಆರೋಪಿಸಿ ನವಲಗುಂದ ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲಾಗಿತ್ತು.

ಇತ್ತೀಚೆಗೆ ಸಚಿವ ಜಮೀರ್ ಅಹ್ಮದ್​ ಖಾನ್ ವಿರುದ್ಧ ಸಲ್ಲಿಸಲಾಗಿದ್ದ ಚುನಾವಣಾ ತಕರಾರು ಅರ್ಜಿಯನ್ನು ಕರ್ನಾಟಕ ಹೈಕೋರ್ಟ್ ವಜಾಗೊಳಿಸಿತ್ತು. ಜಮೀರ್ ಆಯ್ಕೆ ಪ್ರಶ್ನಿಸಿ ಅದೇ ಕ್ಷೇತ್ರದ ಮತದಾರರೊಬ್ಬರು ಅರ್ಜಿ ಸಲ್ಲಿಸಿದ್ದರು. ಅದನ್ನು ಪರಿಶೀಲಿಸಿದ ನ್ಯಾಯಮೂರ್ತಿ.ಎಂ.ಐ.ಅರುಣ್ ಅವರಿದ್ದ ಏಕಸದಸ್ಯ ಪೀಠ ಈ ಆದೇಶ ನೀಡಿತ್ತು.


Spread the love

LEAVE A REPLY

Please enter your comment!
Please enter your name here