ಬಿಗ್ ಬಾಸ್ ಗೆ ಬಿಗ್ ಶಾಕ್: “ಶೋ” ರದ್ದು ಮಾಡುವಂತೆ ಕೋರ್ಟ್ ಮೆಟ್ಟಿಲೇರಿದ ವಕೀಲ, ತುರ್ತು ನೋಟಿಸ್ ಜಾರಿ!

0
Spread the love

ಕನ್ನಡದಲ್ಲಿ ಪ್ರಸಾರ ಆಗುತ್ತಿರುವ ಬಿಗ್ ಬಾಸ್ ಸೀಸನ್ 11ರ ಕಾರ್ಯಕ್ರಮ ನಿಲ್ಲಿಸುವಂತೆ ವಕೀಲರೊಬ್ಬರು ಕೋರ್ಟ್ ಮೆಟ್ಟಿಲೇರಿದ್ದಾರೆ. ಬಿಗ್ ಬಾಸ್ 11 ನೇ ಸೀಸನ್ ಪ್ರಾರಂಭವಾಗಿ ಇಂದಿಗೆ 19 ದಿನ ಕಳೆದಿದೆ.

Advertisement

ಕಳೆದ ವಾರ ಬಿಗ್ ಬಾಸ್’ ಮನೆಯಲ್ಲಿ ಮಹಿಳಾ ಸ್ಪರ್ಧಿಗಳ ಖಾಸಗಿತನಕ್ಕೆ ಧಕ್ಕೆಯಾಗಿದೆ ಅಂತ ಮಹಿಳಾ ಆಯೋಗಕ್ಕೆ ಪತ್ರದ ಮೂಲಕ ವಕೀಲೆ ದೂರು ನೀಡಿದ್ದರು.ಇನ್ನೂ ಇದೇ ಶೋನಲ್ಲಿ ಮಾನವ ಹಕ್ಕುಗಳ ಉಲ್ಲಂಘನೆಯಾಗುತ್ತಿದೆ ಎಂದು ರಾಜ್ಯ ಮಾನವ ಹಕ್ಕುಗಳ ಆಯೋಗಕ್ಕೆ ದೂರು ಸಲ್ಲಿಕೆಯಾಗಿತ್ತು. ಈ ಹಿನ್ನೆಲೆಯಲ್ಲಿ ಬಿಗ್ ಬಾಸ್ ತಂಡ ಎಚ್ಚೆತ್ತುಕೊಂಡು ಈ ಬಾರಿಯ ನರಕ-ಸ್ವರ್ಗ ಎಂಬ ಪರಿಕಲ್ಪನೆಯನ್ನು ಅರ್ಧಕ್ಕೆ ನಿಲ್ಲಿಸಿ ಎಲ್ಲಾ ಸ್ಪರ್ಧಿಗಳನ್ನು ಒಂದೇ ಮನೆಯಲ್ಲಿ ಇರುವ ಅವಕಾಶ ಕಲ್ಪಿಸಿಕೊಡಲಾಗಿದೆ.

ಸಂಕಷ್ಟಗಳಿಂದ ಮುಕ್ತಿಗೊಂಡಿದೆ ಎಂದುಕೊಂಡಿದ್ದ ಕಲರ್ಸ್ ಕನ್ನಡ ತಂಡಕ್ಕೆ ಮತ್ತೊಂದು ಸಂಕಷ್ಟ ಎದುರಾಗಿದೆ. ಬಿಗ್ ಬಾಸ್ 11 ನೇ ಸೀಸನ್ ಪ್ರಸಾರವನ್ನು ಖಾಯಂ ಅಗಿ ರದ್ದುಪಡಿಸುವಂತೆ ಶಿವಮೊಗ್ಗ ಜಿಲ್ಲೆಯ ಸಾಗರದ ಮಾನ್ಯ ಪ್ರಧಾನ ವ್ಯವಹಾರ ನ್ಯಾಯಾಧೀಶರ ನ್ಯಾಯಾಲಯದಲ್ಲಿ ಅರ್ಜಿ ಸಲ್ಲಿಸಲಾಗಿದೆ.

ಬಿಗ್ ಬಾಸ್ 11 ನೇ ಸೀಸನ್ ವಿರುದ್ಧ ಶಿವಮೊಗ್ಗ ಜಿಲ್ಲೆಯ ಸಾಗರದ ವಕೀಲ ಕೆ.ಎಲ್ ಭೋಜರಾಜ್ ಎಂಬವರು ವ್ಯವಹಾರ ಪ್ರಕ್ರಿಯಾ ಸಂಹಿತೆ ಆದೇಶ 39 ನಿಯಮ 1 ಮತ್ತು 2 ರೆಡ್ ವಿತ್ ಸೆಕ್ಷನ್ 151ರ ಪ್ರಕಾರ ಅರ್ಜಿ ಸಲ್ಲಿಸಿದ್ದು, ನ್ಯಾಯಾಧೀಶರಾದ ಚಾಂದಿನಿ ಜಿ.ಯು ರವರು ವಕೀಲ ಕೆ.ಎಲ್ ಭೋಜರಾಜ್ ರವರ ಅರ್ಜಿ ಕೈಗೆತ್ತಿಕೊಂಡಿದೆ.

ಸಿವಿಲ್ ಕಾರ್ಯವಿಧಾನದ ಕೋಡ್ ಕಾಯಿದೆ U/sec.26,order7,rule1 ಅಡಿಯಲ್ಲಿ ಕಲರ್ಸ್ ಕನ್ನಡ ವಾಹಿನಿಯ ನಿರ್ಮಾಪಕ ಹಾಗೂ ಸಂಪಾದಕರಿಗೆ ತುರ್ತು ನೋಟಿಸ್ ನೀಡಿದ್ದಾರೆ. ಅರ್ಜಿಯ ಮುಂದಿನ ವಿಚಾರಣೆ ಅಕ್ಟೋಬರ್ 28 ರಂದು ನಡೆಯಲಿದೆ.


Spread the love

LEAVE A REPLY

Please enter your comment!
Please enter your name here