ಧಾರವಾಡ:– ತಾಲೂಕಿನ ಇಟಿಗಟ್ಟಿ ಬೈಪಾಸ್ ರಸ್ತೆಯಲ್ಲಿ ಸಂಭವಿಸಿದ ಬೈಕ್ ಅಪಘಾತದಲ್ಲಿ ಡಿಆರ್ ಎಎಸ್ಐ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಜರುಗಿದೆ. D.R ASI ಎಲ್ಲಪ್ಪ ಕುಂಬಾರ್ ಎಂಬುವವರೇ ಮೃತ ದುರ್ದೈವಿ. ಧಾರವಾಡ ಕಡೆಯಿಂದ ಹುಬ್ಬಳ್ಳಿ ಕಡೆಗೆ ಬೈಕ್ನಲ್ಲಿ ಹೊರಟಿದ್ದಾಗ ಅಪರಿಚಿತ ವಾಹನ ಡಿಕ್ಕಿ ಹೊಡೆದಿದೆ.
Advertisement
ಈ ವೇಳೆ ಬೈಕ್ ಮೇಲಿದ್ದ ಯಲ್ಲಪ್ಪ ಅವರ ತಲೆಗೆ ಗಂಭೀರ ಪೆಟ್ಟಾಗಿದ್ದು, ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಸ್ಥಳಕ್ಕೆ ಧಾರವಾಡ ಗ್ರಾಮೀಣ ಠಾಣೆ ಪೊಲೀಸರು ಭೇಟಿ ನೀಡಿಪರಿಶೀಲನೆ ನಡೆಸಿದ್ದಾರೆ. ಎಸ್ಕೇಪ್ ಆಗಿರುವ ಆರೋಪಿಗಾಗಿ ಶೋಧ ಕಾರ್ಯ ಮುಂದುವರಿದಿದೆ.