ಆನೇಕಲ್:- ತಮಿಳುನಾಡು ಹೊಸೂರಿನ ಮತ್ತಿಗೆರೆ ರಸ್ತೆಯಲ್ಲಿ ನಿಂತಿದ್ದ ಲಾರಿಗೆ ಹಿಂಬದಿಯಿಂದ ಬೈಕ್ ಸವಾರ ಡಿಕ್ಕಿ ಹೊಡೆದ ಪರಿಣಾಮ ಮೂವರು ಶಾಲಾ ವಿಧ್ಯಾರ್ಥಿಗಳು ದುರಂತ ಅಂತ್ಯ ಕಂಡಿರುವ ಘಟನೆ ಜರುಗಿದೆ.
Advertisement
ಮೃತ ವಿದ್ಯಾರ್ಥಿಗಳನ್ನು ಮದನ್ ಕುಮಾರ್, ಹರೀಶ್ ಕುಮಾರ್, ಅರಿಯನ್ ಸಿಂಗ್ ಎಂದು ಗುರುತಿಸಲಾಗಿದೆ. ವಿದ್ಯಾರ್ಥಿಗಳು ಖಾಸಗಿ ಶಾಲೆಯಲ್ಲಿ ಒಂಬತ್ತನೇ ತರಗತಿ ಓದುತ್ತಿದ್ದರು. ಶಾಲೆ ಬಿಟ್ಟ ಬಳಿಕ ಮೂವರು ಸ್ನೇಹಿತರು ಬೈಕ್ ನಲ್ಲಿ ತ್ರಿಬಲ್ ರೈಡಿಂಗ್ ಮಾಡಿದ್ದರು.
ಈ ವೇಳೆ ನಿಂತಿದ್ದ ಲಾರಿಗೆ ಡಿಕ್ಕಿ ಹೊಡೆದ ಪರಿಣಾಮ ದುರಂತ ಸಂಭವಿಸಿದೆ. ಸದ್ಯ ಹೊಸೂರಿನ ಸರ್ಕಾರಿ ಆಸ್ಪತ್ರೆಗೆ ಮೃತದೇಹಗಳ ರವಾನೆ ಮಾಡಲಾಗಿದೆ. ಘಟನಾ ಸ್ಥಳಕ್ಕೆ ಕೃಷ್ಣಗಿರಿ ಜಿಲ್ಲಾ ಎಸ್ಪಿ ರಾಣತುರೈ ಭೇಟಿ ನೀಡಿದ್ದಾರೆ.