ಕಂಟೇನರ್ ಲಾರಿಗೆ ಬೈಕ್ ಡಿಕ್ಕಿ: ಭೀಕರ ಅಪಘಾತಕ್ಕೆ ಮೂವರು ಬಲಿ!

0
Spread the love

ತುಮಕೂರು:- ಕಂಟೇನರ್ ಲಾರಿಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಮೂವರು ಸಾವನ್ನಪ್ಪಿರುವ ಘಟನೆ ತುಮಕೂರು ಗ್ರಾಮಾಂತರ ವ್ಯಾಪ್ತಿಯ ಹಿರೇಹಳ್ಳಿ ಸಮೀಪದ ನಂದಿಹಳ್ಳಿ ಬಳಿಯ ರಾಷ್ಟ್ರೀಯ ಹೆದ್ದಾರಿ 48 ರಲ್ಲಿ ಜರುಗಿದೆ. ಅಪಘಾತದಲ್ಲಿ ಮೃತಪಟ್ಟವರನ್ನು ರಾಜೇಶ್ (25), ದನಂಜಯ್ (27), ಧನುಷ್ (23) ಎಂದು ಗುರುತಿಸಲಾಗಿದೆ.

Advertisement

ಬಂಕ್​​ನಿಂದ ಪೆಟ್ರೋಲ್ ತುಂಬಿಸಿಕೊಂಡು ಹೆದ್ದಾರಿಗೆ ಬರುತ್ತಿದ್ದ ಕಂಟೈನರ್​​​​ ಲಾರಿಗೆ ಬೈಕ್​​ ಡಿಕ್ಕಿ ಹೊಡೆದಿದೆ. ಪರಿಣಾಮ ಬೈಕ್​ನಲ್ಲಿ ತ್ರಿಬಲ್ ರೈಡ್ ಹೋಗುತ್ತಿದ್ದ ಸವಾರರು ಮೃತಪಟ್ಟಿದ್ದಾರೆ. ಕ್ಯಾತಸಂದ್ರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದ್ದು, ಸ್ಥಳಕ್ಕೆ ಎಎಸ್​​​ಪಿ ಗೋಪಾಲ್, ಡಿವೈಎಸ್​​ಪಿ ಚಂದ್ರಶೇಖರ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಮೃತರು ದಾಬಸ್ ಪೇಟೆಯ ಖಾಸಗಿ ಕಂಪನಿಯಲ್ಲಿ ಸೆಕ್ಯೂರಿಟಿಗಳಾಗಿ ಕಾರ್ಯನಿರ್ವಹಿಸುತ್ತಿದ್ದರು. ರಾತ್ರಿ ಪಾಳಿ ಮುಗಿಸಿ ತುಮಕೂರಿಗೆ ವಾಪಸಾಗುವಾಗ ಅಪಘಾತ ಸಂಭವಿಸಿದೆ. ಸದ್ಯ, ಮೃತದೇಹಗಳನ್ನು ಜಿಲ್ಲಾಸ್ಪತ್ರೆಗೆ ಸ್ಥಳಾಂತರ ಮಾಡಲಾಗಿದೆ.


Spread the love

LEAVE A REPLY

Please enter your comment!
Please enter your name here