ಹಾಲಿನ ಲಾರಿಗೆ ಬೈಕ್ ಡಿಕ್ಕಿ: ಓವರ್ ಟೇಕ್ ಮಾಡಲು ಹೋಗಿ ಸವಾರ ದುರ್ಮರಣ!

0
Spread the love

ಬೆಂಗಳೂರು:- ಸದಾಶಿವನಗರ ಪೊಲಿಸ್ ಠಾಣಾ ವ್ಯಾಪ್ತಿಯಲ್ಲಿ ಸಂಭವಿಸಿದ ಅಪಘಾತದಲ್ಲಿ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಜರುಗಿದೆ. ಓವರ್ ಟೇಕ್ ಮಾಡಲು ಹೋಗಿ ಹಾಲಿನ ಲಾರಿಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಈ ದುರಂತ ಸಂಭವಿಸಿದೆ. ಅದೃಷ್ಟವಶಾತ್ ಬೈಕ್ ನಲ್ಲಿದ್ದ ಮತ್ತೋರ್ವ ಸವಾರ, ಪ್ರಾಣಾಪಾಯದಿಂದ ಪಾರಾಗಿದ್ದಾರೆ.

Advertisement

ಬೆಂಗಳೂರು ಡೈರಿಯಿಂದ ನೆಲಮಂಗಲಕ್ಕೆ ಲಾರಿ ಹೊರಟಿತ್ತು. ಈ ವೇಳೆ KA 53 X 5082 ಸಂಖ್ಯೆಯ ಬೈಕ್, ಅತಿವೇಗವಾಗಿ ಬಂದು ಲಾರಿಗೆ ಡಿಕ್ಕಿ ಹೊಡೆದ ಹಿನ್ನೆಲೆ ದುರಂತ ಸಂಭವಿಸಿದೆ. ಮತ್ತೊಂದೆಡೆ ಲಾರಿ ಚಾಲಕ ನಾಗೇಶ್ ಕುಡಿದು ಲಾರಿ ಓಡಿಸುತ್ತಿದ್ದ ಎನ್ನಲಾಗಿದೆ. ಸದಾಶಿವ ಪೊಲಿಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ಜರುಗಿದೆ.


Spread the love

LEAVE A REPLY

Please enter your comment!
Please enter your name here