ಬೈಕ್’ಗೆ ಹಿಂಬದಿಯಿಂದ ಟ್ಯಾಂಕರ್ ಲಾರಿ ಡಿಕ್ಕಿ: ಸವಾರ ಸಾವು

0
Spread the love

ಬೀದರ್: ಜಿಲ್ಲೆಯ ಬಸವಕಲ್ಯಾಣ ತಾಲೂಕಿನ ರಾಜೇಶ್ವರ ಗ್ರಾಮದ ರಾಷ್ಟ್ರೀಯ ಹೆದ್ದಾರಿ 65 ರಲ್ಲಿ ಚಲಿಸುತ್ತಿದ್ದ ಬೈಕ್ಗೆ ಹಿಂಬದಿಯಿಂದ ಬಂದು ಟ್ಯಾಂಕರ್ ಲಾರಿ ಗುದ್ದಿದ ಪರಿಣಾಮ ಸ್ಥಳದಲ್ಲೇ ಓರ್ವ ಬೈಕ್ ಸವಾರ ಮೃತಪಟ್ಟಿದ್ದು ಮತ್ತೋರ್ವನಿಗೆ ಗಾಯಗಳಾಗಿರುವ ಘಟನೆ ನಡೆದಿದೆ.
ಬಸವಕಲ್ಯಾಣ ತಾಲೂಕಿನ ತಡೋಳ ಗ್ರಾಮದ ಘಾಳೆಪ್ಪ ಖರ್ಗೆ (40) ಘಟನೆಯಲ್ಲಿ ಮೃತಪಟ್ಟಿದ್ದು, ವಿಶ್ವನಾಥ್ ಅಶೋಕ ಖರ್ಗೆ ಎನ್ನುವವರಿಗೆ ಗಂಭೀರವಾಗಿ ಗಾಯಗಳಾಗಿವೆ. ಗಾಯಾಳುವನ್ನು ಹುಮನಾಬಾದನ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಲಾಗಿದೆ.
ಇನ್ನೂ ಸಂಚಾರಿ ಠಾಣೆ ಪಿಎಸ್ಐ ಸಿದ್ದೇಶ್ವರ ನೇತೃತ್ವದ ಪೊಲೀಸರ ತಂಡ ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ್ದು, ಘಟನೆ ಸಂಬಂಧ ಪ್ರಕರಣ ದಾಖಲಾಗಿದೆ.

Advertisement

Spread the love

LEAVE A REPLY

Please enter your comment!
Please enter your name here