ಬೆಂಗಳೂರು:- ವಿಪಕ್ಷಗಳ ಗದ್ದಲದ ನಡುವೆಯೂ ಮುಸ್ಲಿಮರಿಗೆ ಸರ್ಕಾರಿ ಗುತ್ತಿಗೆಗಳಲ್ಲಿ 4% ಮೀಸಲಾತಿ ಕೊಡುವ ಬಿಲ್ ಅನ್ನು ರಾಜ್ಯ ಸರ್ಕಾರ ವಿಧಾನಸಭೆಯಲ್ಲಿ ಪಾಸ್ ಮಾಡಿದೆ.
ಈಗಾಗಲೇ ಬಜೆಟ್ನಲ್ಲಿ ಗುತ್ತಿಗೆ ಮೀಸಲಾತಿಯನ್ನು ಎಸ್ಸಿ-ಎಸ್ಟಿ, ಪ್ರವರ್ಗ 1, 2aಗಳ ಜೊತೆಗೆ 2b ಮುಸ್ಲಿಂ ವರ್ಗವನ್ನೂ ಸೇರಿಸಿ ಗುತ್ತಿಗೆ ಮೊತ್ತವನ್ನು 1 ಕೋಟಿಯಿಂದ 2 ಕೋಟಿ ರೂಗೆ ಏರಿಸುವ ಪ್ರಸ್ತಾಪ ಮಾಡಲಾಗಿತ್ತು. ಇಂದು ಮಂಡನೆಯಾದ ಬಿಲ್ನಲ್ಲಿ 2b ವರ್ಗಕ್ಕೆ ಶೇ.4 ಮೀಸಲಾತಿ ಕೊಡಲು ಕರ್ನಾಟಕ ಸಾರ್ವಜನಿಕ ಸಂಗ್ರಹಣೆಯಲ್ಲಿ ಪಾರದರ್ಶಕತೆ ಕಾಯ್ದೆಗೆ ತಿದ್ದುಪಡಿ ತರಲಾಗಿದೆ. ಇದಕ್ಕೆ ರಾಜ್ಯಪಾಲರು ಅಂಕಿತ ಹಾಕಿದ್ರೆ ಎರಡು ಕೋಟಿ ರೂ. ವರೆಗಿನ ಕಾಮಗಾರಿಗಳಲ್ಲಿ ಮೀಸಲಾತಿ ಸಿಗಲಿದೆ.
ವಿಧೇಯಕ ಪಾಸ್ ಮಾಡುತ್ತಿದ್ದಂತೆ ವಿಪಕ್ಷಗಳು ಕೇಸರಿ ಶಾಲು ತೋರಿಸುತ್ತಾ ಕಾಗದ ಹರಿದು ಆಕ್ರೋಶ ಹೊರಹಾಕಿದವು. ಕೊನೆಗೆ ಸ್ಪೀಕರ್ ಖಾದರ್ ಅನಿರ್ದಿಷ್ಟಾವಧಿಗೆ ವಿಧಾನಸಭೆ ಕಲಾಪ ಮುಂದೂಡಿದರು. ರಾಷ್ಟ್ರಗೀತೆ ಹಾಡಿ ಅನಿರ್ದಿಷ್ಟಾವಧಿಗೆ ಕಲಾಪ ಮುಂದೂಡಲಾಯಿತು. ವಿಧಾನಸಭೆಯಲ್ಲಿ ಅಂಗೀಕಾರವಾದ ಕೆಟಿಟಿಪಿ ಬಿಲ್ ಅನ್ನು ಸ್ಪೀಕರ್ ಪರಿಷತ್ಗೆ ಕಳಿಸಿದರು.