HomeKarnataka Newsಅನ್ನದಾತರ ಜೊತೆ ಜನ್ಮದಿನ ಯಾವತ್ತೂ ಮರೆಯಲಾರೆ: ಬಿ.ವೈ. ವಿಜಯೇಂದ್ರ

ಅನ್ನದಾತರ ಜೊತೆ ಜನ್ಮದಿನ ಯಾವತ್ತೂ ಮರೆಯಲಾರೆ: ಬಿ.ವೈ. ವಿಜಯೇಂದ್ರ

For Dai;y Updates Join Our whatsapp Group

Spread the love

ಬೆಳಗಾವಿ: ಈ ನಾಡಿಗೆ ಅನ್ನವನ್ನು ಕೊಡುವ ಅನ್ನದಾತರ ಜೊತೆ ನನ್ನ 50 ನೇ ವರ್ಷದ ಜನ್ಮದಿನವನ್ನು ಆಚರಿಸುತ್ತಿರುವುದು ನನ್ನ ಜೀವನದಲ್ಲಿ ಮರೆಯಲಾರದ ಸುಸಂದರ್ಭ. ಇದೊಂದು ಸುದೈವ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ. ವಿಜಯೇಂದ್ರ ಅವರು ವಿಶ್ಲೇಷಿಸಿದ್ದಾರೆ.

ಜಿಲ್ಲೆಯ ಗುರ್ಲಾಪುರ ಕ್ರಾಸ್ ನÀಲ್ಲಿ ನಡೆಯುತ್ತಿರುವ ಕಬ್ಬು ಬೆಳೆಗಾರರ ಹೋರಾಟದಲ್ಲಿ ಇಂದು ಕೂಡ ವಿಜಯೇಂದ್ರ ಅವರು ಭಾಗವಹಿಸಿದ್ದರು. ಹೋರಾಟಗಾರರನ್ನುದ್ದೇಶಿಸಿ ಮಾತನಾಡಿದ ಅವರು, ನಿಮ್ಮ ಹೋರಾಟಕ್ಕೆ ನ್ಯಾಯ ಸಿಕ್ಕೇ ಸಿಗಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಸಚಿವರು ಬಂದು ಕೇಂದ್ರ ಸರಕಾರದ ಮೇಲೆ ಗೂಬೆ ಕೂರಿಸಬಾರದು ಎಂದು ಎಚ್ಚರಿಕೆ ನೀಡಿದರು. ಸಚಿವರು ಬಂದಾಗ ನಾನು ಇಲ್ಲಿ ಇರುವುದಿಲ್ಲ ಎಂದು ತಿಳಿಸಿದರು. ತೂಕದಲ್ಲಿ, ರಿಕವರಿ ವಿಚಾರದಲ್ಲಿ ಕಬ್ಬು ಬೆಳೆಗಾರರಿಗೆ ಮೋಸ ಆಗುತ್ತಿದೆ. ರೈತರ ಕಣ್ಮುಂದೆಯೇ ಮೋಸ ಆಗುತ್ತಿದೆ. ಒಣ ಬಿಸಿಲಿನಲ್ಲಿ ಹೋರಾಟ ಮಾಡುತ್ತಿರುವ ರೈತರ ಸಮಸ್ಯೆಗೆ ಇತಿಶ್ರೀ ಆಗಬೇಕೆಂದು ಆಶಿಸಿದರು.

ಸ್ಪಂದಿಸದ ಸಚಿವರು, ಸರಕಾರ; ಚುರ್ರೆಂದ ಹೃದಯ..

20 ಕಿಮೀ ದೂರದಲ್ಲಿರುವ ಉಸ್ತುವಾರಿ ಸಚಿವರು, 50 ಕಿಮೀ ದೂರದಲ್ಲಿರುವ ಸಕ್ಕರೆ ಸಚಿವರು ಕಬ್ಬು ಬೆಳೆಗಾರರ ಹೋರಾಟ ನೋಡಿ ತಕ್ಷಣ ಬಂದು ಅಹವಾಲು ಸ್ವೀಕರಿಸಿ ಸಮಸ್ಯೆಗೆ ಸ್ಪಂದಿಸಬಹುದೆಂದು ಕಾತರದಿಂದ ನೋಡುತ್ತಿದ್ದೆ. 6ನೇ ದಿನಕ್ಕೆ ಹೋರಾಟ ಕಾಲಿಟ್ಟರೂ ರಾಜ್ಯ ಸರಕಾರ ಗಮನ ಕೊಡಲಿಲ್ಲ; ಆಗ ನನ್ನ ಹೃದಯ ಚುರ್ ಗುಟ್ಟಿತು ಎಂದು ಬಿ.ವೈ. ವಿಜಯೇಂದ್ರ ಅವರು ತಿಳಿಸಿದರು.

ರೈತರು ಸುಡು ಬಿಸಿಲನ್ನೂ ಲೆಕ್ಕಿಸದೇ ಹೋರಾಟ ಮಾಡುತ್ತಿದ್ದರೂ ರಾಜ್ಯ ಸರಕಾರಕ್ಕೆ ಅವರ ಕೂಗು ಕೇಳಿಸಿಲ್ಲ; ಇದಕ್ಕೆ ರಾಜ್ಯ ಸರಕಾರಕ್ಕೆ ಅಧಿಕಾರದ ಮದ ಏರಿದ್ದೇ ಕಾರಣ ಎಂದು ನನಗೆ ಅನಿಸಿತು ಎಂದು ಆಕ್ಷೇಪಿಸಿದರು. ಹಾಗಾಗಿ ಒಂದು ಕ್ಷಣ ತಡ ಮಾಡದೇ, ಪಕ್ಷದ ಮುಖಂಡರ ಜೊತೆ ಚರ್ಚಿಸಿ ಇಲ್ಲಿಗೆ ಧಾವಿಸಿದೆ ಎಂದರು. ಹೋರಾಟದಲ್ಲಿ ಪಾಲ್ಗೊಂಡು ರಾಜ್ಯ ಸರಕಾರದ ಕಿವಿ ಹಿಂಡುವ ಕೆಲಸ ಮಾಡಿದ್ದೇನೆ ಎಂದು ಅವರು ಹೇಳಿದರು.

ಸನ್ಮಾನ್ಯ ಬಿ.ಎಸ್.ಯಡಿಯೂರಪ್ಪನವರು ‘ನಮ್ಮ ರೈತರಿಗೆ ಬಡತನ ಇರಬಹುದು; ಆದರೂ ಹೃದಯ ಶ್ರೀಮಂತಿಕೆ ಇರುವವರಿದ್ದರೆ ಅದು ನಮ್ಮ ರೈತರದು’ ಎಂದು ಯಾವಾಗಲೂ ಹೇಳುತ್ತಾರೆ ಎಂದು ನೆನಪಿಸಿದರು.
ನಾನು ಈ ವೇದಿಕೆಗೆ ರಾಜಕಾರಣಿಯಾಗಿ, ಶಾಸಕನಾಗಿ ಹೋರಾಟಕ್ಕೆ ಕಾಲಿಟ್ಟಿಲ್ಲ; ನಾಡು ಕಂಡ ಧೀಮಂತ ಹೋರಾಟಗಾರ, ನಾಡು ಕಂಡ ಛಲಗಾರ, ಅಪ್ರತಿಮ ರೈತನಾಯಕ ಬಿ.ಎಸ್.ಯಡಿಯೂರಪ್ಪನವರ ಮಗನಾಗಿ ನಾನು ಇವತ್ತು ಈ ಹೋರಾಟಕ್ಕೆ ಬಂದಿದ್ದೇನೆ ಎಂದು ತಿಳಿಸಿದರು.


Spread the love
Vijaya Sakshi
Vijaya Sakshi
Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

LEAVE A REPLY

Please enter your comment!
Please enter your name here

E-Paper

E-paper

Must Read

spot_img
error: Content is protected !!