ವಿಜಯಸಾಕ್ಷಿ ಸುದ್ದಿ, ಹರಪನಹಳ್ಳಿ : ಬಿಜೆಪಿ ನೂತನ ಮಂಡಲ ಅಧ್ಯಕ್ಷರಾಗಿ ತಾಲೂಕಿನ ಕೆ.ಕಲ್ಲಹಳ್ಳಿ ಗ್ರಾಮದ ಕೆ.ಲಕ್ಷ್ಮಣ ಅವರನ್ನು ನೇಮಕ ಮಾಡಿ ಬಿಜೆಪಿ ಜಿಲ್ಲಾಧ್ಯಕ್ಷ ಚನ್ನಬಸವನಗೌಡ ಪಾಟೀಲ್ ಆದೇಶ ಹೊರಡಿಸಿದ್ದಾರೆ.
Advertisement
ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಅವರ ಸೂಚನೆ ಮೇರೆಗೆ ಸಂಘಟನಾತ್ಮಕ ದೃಷ್ಟಿಯಿಂದ, ಕೆ.ಲಕ್ಷ್ಮಣ ಅವರನ್ನು ನೂತನ ಮಂಡಲ ಅಧ್ಯಕ್ಷರನ್ನಾಗಿ ಹಾಗೂ ಮಂಡಲ ಪ್ರಧಾನ ಕಾರ್ಯದರ್ಶಿಗಳಾಗಿ ಬಾವಿಹಳ್ಳಿ ಎ.ಉದಯಕುಮಾರ ಮತ್ತು ವಡ್ಡಿನ ದಾದಾಪುರದ ಯು.ಎನ್. ಪ್ರವೀಣ್ ಅವರನ್ನು ನೇಮಿಸಿ ಆದೇಶ ಹೊರಡಿಸಿದ್ದಾರೆ.