ಬಿಜೆಪಿಯವರಿಗೆ ಸ್ಥಿರ ಸರ್ಕಾರವನ್ನು ಸಹಿಸಿಕೊಳ್ಳಲು ಆಗುತ್ತಿಲ್ಲ: ದಿನೇಶ್ ಗುಂಡೂರಾವ್

0
Spread the love

ಬೆಳಗಾವಿ: ಸಿಎಂ ಅವರ ಭವಿಷ್ಯವನ್ನು ನಿರ್ಧರಿಸುವ ಪ್ರಶ್ನೆಯಿಲ್ಲ. ಸಿದ್ದರಾಮಯ್ಯ ಅವರೇ ಸಿಎಂ ಆಗಿ ಇರುತ್ತಾರೆ. ಸಿಎಂ ರೇಸ್‌ʼನಲ್ಲಿ ಯಾರು ಇಲ್ಲ ಎಂದು ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ, ನಗರದಲ್ಲಿ ಮಾತನಾಡಿದ ಅವರು, ಬಿಜೆಪಿಯವರಿಗೆ ಸ್ಥಿರ ಸರ್ಕಾರವನ್ನು ಸಹಿಸಿಕೊಳ್ಳಲು ಆಗುತ್ತಿಲ್ಲ. ಸರ್ಕಾರ ಅಸ್ಥಿರ ಮಾಡುವುದು, ಸರ್ಕಾರ ಬೀಳಿಸುವುದು, ಸರ್ಕಾರ ಒಡೆಯುವುದು, ಆಪರೇಷನ್ ಮಾಡುವ ಕೆಲಸವನ್ನು ಬಿಜೆಪಿಯವರು ಮಾಡುತ್ತಿದ್ದಾರೆ.

Advertisement

ಕೇಂದ್ರ ಸರ್ಕಾರದವರಿಗೆ ಇದೇ ಕೆಲಸ ಆಗಿದೆ. ಸರ್ಕಾರ ಬೀಳಿಸುವುದೇ ಒಂದೇ ಅವರ ಕಾರ್ಯಕ್ರಮ ಆಗಿದೆ ಎಂದು ಕಿಡಿಕಾರಿದರು. ನಾಳೆ ಸಿಎಂ ಭವಿಷ್ಯ ನಿರ್ಧಾರ ಆಗುತ್ತಾ ಎಂಬ ಮಾಧ್ಯಮಗಳ ಪ್ರಶ್ನೆಗೆ ಉತ್ತರಿಸಿದ ಅವರು, ಆಗುವುದಿಲ್ಲ. ಸಿಎಂ ಅವರ ಭವಿಷ್ಯವನ್ನು ನಿರ್ಧರಿಸುವ ಪ್ರಶ್ನೆಯಿಲ್ಲ. ಸಿದ್ದರಾಮಯ್ಯ ಅವರೇ ಸಿಎಂ ಆಗಿ ಇರುತ್ತಾರೆ. ಸಿಎಂ ರೇಸ್‌ನಲ್ಲಿ ಯಾರು ಇಲ್ಲ ಎಂದು ಸಮರ್ಥಿಸಿಕೊಂಡರು.


Spread the love

LEAVE A REPLY

Please enter your comment!
Please enter your name here