ಬೆಂಗಳೂರು: ಒಳ ಮೀಸಲಾತಿ ಗೊಂದಲ ನಿವಾರಣೆ ಮಾಡುವಂತೆ ಬಿಜೆಪಿ ನಿಯೋಗ ರಾಜ್ಯಪಾಲರಿಗೆ ದೂರು ಸಲ್ಲಿಸಿದೆ. ಮಾಜಿ ಡಿಸಿಎಂ ಹಾಗೂ ಸಂಸದ ಗೋವಿಂದ್ ಕಾರಜೋಳ ನೇತೃತ್ವದಲ್ಲಿ ನಿಯೋಗ ರಾಜ್ಯಪಾಲರನ್ನು ಭೇಟಿಯಾಯಿತು.
ದೂರು ಸಲ್ಲಿಸಿದ ಬಳಿಕ ಮಾತನಾಡಿದ ಕಾರಜೋಳ, ಸಿದ್ದರಾಮಯ್ಯ ನೇತೃತ್ವದ ಸರ್ಕಾರ ಒಳ ಮೀಸಲಾತಿ ವಿಚಾರದಲ್ಲಿ ಸಮರ್ಪಕವಾಗಿ ನಡೆದುಕೊಂಡಿಲ್ಲ ಎಂದು ಆರೋಪಿಸಿದರು. “25-30 ವರ್ಷಗಳ ಹೋರಾಟದ ನಂತರವೂ ನ್ಯಾಯ ಸಿಗಲಿಲ್ಲ. ಸರ್ಕಾರ ಏಕಪಕ್ಷೀಯ ನಿರ್ಧಾರ ತೆಗೆದುಕೊಂಡಿದೆ,” ಎಂದು ಅವರು ಕಿಡಿಕಾರಿದರು.
ಅಲೆಮಾರಿ ಸಮುದಾಯಕ್ಕೆ ಅನ್ಯಾಯವಾಗಿದೆ ಎಂದು ಆರೋಪಿಸಿದ ಅವರು, ಸರ್ಕಾರ ನಾಗಮೋಹನ್ ದಾಸ್ ಹಾಗೂ ಮಾಧುಸ್ವಾಮಿ ವರದಿಗಳನ್ನು ಜಾರಿಗೆ ತರಲಿಲ್ಲ ಎಂದು ಹೇಳಿದರು.
ಸರ್ವೋಚ್ಚ ನ್ಯಾಯಾಲಯ ಆದೇಶ ಪಾಲಿಸಬೇಕಿತ್ತು, ಆದರೆ ಚರ್ಚೆ ಇಲ್ಲದೆ ಬಿಲ್ ಪಾಸ್ ಮಾಡಲಾಗಿದೆ ಎಂದು ಬಿಜೆಪಿ ಆರೋಪಿಸಿದೆ.



