ಬಿಜೆಪಿಗೆ ಭ್ರಷ್ಟಾಚಾರದ ಬಗ್ಗೆ ಮಾತನಾಡುವ ನೈತಿಕತೆ ಇಲ್ಲ: ಜಗದೀಶ್ ಶೆಟ್ಟರ್

0
Spread the love

ಹುಬ್ಬಳ್ಳಿ:- ಮಾಜಿ ಸಿಎಂ ಜಗದೀಶ್ ಶೆಟ್ಟರ್ ಅವರು, ಬಿಜೆಪಿ ಕಾಂಗ್ರೆಸ್ ಸರ್ಕಾರ ಬೀಳುತ್ತೇ ಎಂಬ ಭ್ರಮೆಯಲ್ಲಿ ಇದ್ದಾರೆ ಎಂದು ಹೇಳಿದ್ದಾರೆ. ಈ ಸಂಬಂಧ ಮಾತನಾಡಿದ ಅವರು, ಭ್ರಷ್ಟಾಚಾರದ ಬಗ್ಗೆ ಮಾತನಾಡಲು ಬಿಜೆಪಿಯವರಿಗೆ ನೈತಿಕತೆ ಇಲ್ಲ. ಅವರು ಇಂದಿಗೂ ಸರ್ಕಾರ ಬೀಳುತ್ತದೆ ಎಂಬ ಭ್ರಮೆಯಲ್ಲಿದ್ದಾರೆ ಎಂದರು.

Advertisement

ಬಿಜೆಪಿ 40 ಪರ್ಸೆಂಟ್‌ ಸರ್ಕಾರ ಎಂಬ ಕಾರಣದಿಂದ ಅಧಿಕಾರ ಕಳೆದುಕೊಂಡಿತು. ನಾವು ಭ್ರಷ್ಟಾಚಾರ ಮಾಡಿಲ್ಲ ಅಂತ ಸಾಬೀತು ಪಡಿಸಲು ಅವರಿಗೆ ಆಗಲಿಲ್ಲ. ಚುನಾವಣೆಯಲ್ಲಿ ಬಿಜೆಪಿಯವರು ಕೋಟ್ಯಂತರ ರುಪಾಯಿ ಖರ್ಚು ಮಾಡುತ್ತಾರಲ್ಲ, ಅವರೇನು ಸತ್ಯ ಹರಿಶ್ಚಂದ್ರರಾ? ಆ ದುಡ್ಡು ಎಲ್ಲಿಂದ ಬರುತ್ತೆ ತಿಳಿಸಲಿ ಎಂದರು.


Spread the love

LEAVE A REPLY

Please enter your comment!
Please enter your name here