ವಿಜಯಪುರ: ಬಿಜೆಪಿ ರಾಜಕೀಯ ಬಿಟ್ಟು ಬೇರೇನೂ ಮಾಡುತ್ತಿಲ್ಲ ಎಂದು ಸಚಿವ ಎಂಬಿ ಪಾಟೀಲ್ ಕಿಡಿಕಾರಿದ್ದಾರೆ. ವಿಜಯಪುರದಲ್ಲಿ ಮಾತನಾಡಿದ ಅವರು, ಬಿಜೆಪಿ ರಾಜಕೀಯ ಬಿಟ್ಟು ಬೇರೇನೂ ಮಾಡುತ್ತಿಲ್ಲ, ಇಷ್ಟು ವರ್ಷ ಕುಂಭಕರ್ಣ ನಿದ್ರೆಯಲ್ಲಿದವರು ಈಗ ಎಚ್ಚೆತ್ತುಕೊಂಡಿದ್ದಾರೆ, ಗೆಜೆಟ್ ನೋಟಿಫೀಕೇಶ್ 1974ರಿಂದ ಇದೆ,
Advertisement
ಅವರ ಸರ್ಕಾರ ಅಧಿಕಾರದಲ್ಲಿದ್ದಾಗ ಯಾಕೆ ಅದನ್ನು ರದ್ದು ಮಾಡಲಿಲ್ಲ? ಮುಸ್ಲಿಂ ಸಮುದಾಯದವರಿಗೂ ನೋಟೀಸ್ ಜಾರಿಯಾಗಿವೆ, ಕೇವಲ ಹಿಂದೂಗಳಿಗೆ ಮಾತ್ರವಲ್ಲ, ವಕ್ಫ್ ಬೋರ್ಡ್ ನಿಂತ ತಪ್ಪಾಗಿದ್ದರೆ ಅದರ ವಿರುದ್ಧ ನಿರ್ದಾಕ್ಷಿಣ್ಯವಾಗಿ ಕ್ರಮ ತೆಗೆದುಕೊಳ್ಳಲಾಗುವುದು ಎಂದು ಹೇಳಿದರು.