ಹುಬ್ಬಳ್ಳಿ: ಬಿಜೆಪಿಯವರು ಹಣದ ಮೇಲೆ ಚುನಾವಣೆ ಮಾಡುತ್ತಿದ್ದಾರೆ ಎಂದು ಸಚಿವ ಶಿವಾನಂದ ಪಾಟೀಲ್ ಹೇಳಿದ್ದಾರೆ. ನಗರದಲ್ಲಿ ಮಾತನಾಡಿದ ಅವರು, ಬಿಜೆಪಿಯವರು ಹಣದ ಮೇಲೆ ಚುನಾವಣೆ ಮಾಡುತ್ತಿದ್ದಾರೆ. ಹಣ ನೂರಕ್ಕೆ ನೂರರಷ್ಟು ಕೆಲಸ ಮಾಡಲ್ಲ.
ಜನ ಬಿಜೆಪಿಯ ಹಣ ತೆಗೆದುಕೊಂಡು ಕಾಂಗ್ರೆಸ್ಗೆ ಮತ ಹಾಕ್ತಾರೆ. ಮೂರು ಉಪಚುನಾವಣೆ ಮುಗಿದ ನಂತರ ಬಿಜೆಪಿ ಪ್ರತಿಭಟನೆ ಮುಗಿಯುತ್ತದೆ, ಮನೆಗೆ ಹೋಗ್ತಾರೆ” ಎಂದು ಸಚಿವ ಶಿವಾನಂದ ಪಾಟೀಲ್ ಟೀಕಿಸಿದರು. ನಮ್ಮ ಪಕ್ಷದಲ್ಲಿ ಸಾಮರಸ್ಯ ಇದೆ, ಬಿಜೆಪಿಯಲ್ಲಿ ಇಲ್ಲ. ಈ ಬಾರಿ ಕಾಂಗ್ರೆಸ್ ಖಂಡಿತ ಗೆದ್ದೇ ಗೆಲ್ಲುತ್ತದೆ. ಅದರಲ್ಲಿ ಎರಡು ಮಾತಿಲ್ಲ ಎಂದರು.
ಇನ್ನೂ ವಕ್ಫ್ನಲ್ಲಿ ಕಾಂಗ್ರೆಸ್ ತಪ್ಪು ಮಾಡಿಲ್ಲ. ಈ ಹಿಂದೆ ಬಿಜೆಪಿ ಕೊಟ್ಟ ನೋಟಿಸ್ ಮುಂದುವರೆಯುತ್ತಿದೆ. ಕಾಂಗ್ರೆಸ್ ಯಾವತ್ತೂ ರೈತರ ವಿರೋಧಿ ಅಲ್ಲ. ಹಾಗೇನಾದರೂ ಆಗಿದ್ದರೆ ಕಾಂಗ್ರೆಸ್ 22 ಲಕ್ಷ ಎಕರೆ ಜಮೀನನ್ನು ದೇವರಾಜ ಅರಸು ಅವರಿದ್ದಾಗ ರಾಜ್ಯದ ಜನರಿಗೆ ಕೊಡ್ತಾ ಇರ್ಲಿಲ್ಲ.
ನೀವು ಹೇಗೆ ಕಾಂಗ್ರೆಸ್ ರೈತ ವಿರೋಧಿ ಅಂತ ಹೇಳುತ್ತೀರಿ? ವಿಜಯಪುರದಲ್ಲಿ ರೈತರು ಯಾವುದೋ ಒಂದೆರಡು ಆಗಿದ್ದರೆ, ಧರಣಿ ಮಾಡ್ತಾರೆ. ಅವರಿಗೆ ಆ ಅಧಿಕಾರ ಇದೆ. ಅದಕ್ಕೆ ಮುಖ್ಯಮಂತ್ರಿ ಹೇಳಿಕೆ ನೀಡಿದ್ದಾರೆ. ನೋಟಿಸ್ ಹಿಂಪಡೆದು, ರೈತರಿಗೆ ಅನ್ಯಾಯ ಆಗದಂತೆ ನೋಡಿಕೊಳ್ಳುತ್ತೇವೆ ಅಂದಿದ್ದಾರೆ ಎಂದರು.