ಬೆಂಗಳೂರು: ಮುನಿರತ್ನ ವಿರುದ್ಧದ ಕೇಸ್ʼಗೆ ಬಿಜೆಪಿ ನಾಯಕರು ಉತ್ತರ ಕೊಡಬೇಕು ಎಂದು ಮಾಜಿ ಸಂಸದ ಡಿಕೆ ಸುರೇಶ್ ಹೇಳಿದ್ದಾರೆ. ಬಿಜೆಪಿ ಶಾಸಕ ಮುನಿರತ್ನ ವಿರುದ್ಧ ಅತ್ಯಾಚಾರದ ಕೇಸ್ ದಾಖಲಾಗಿರುವ ವಿಚಾರಕ್ಕೆ ಸಂಬಂಧಿಸಿದಂತೆ ಬೆಂಗಳೂರಿನಲ್ಲಿ ಮಾತನಾಡಿದ ಅವರು, ಬಿಜೆಪಿ ಕಾರ್ಯಕರ್ತರು ಅವರಿಗಾದ ಅವಮಾನ,
Advertisement
ದೌರ್ಜನ್ಯವನ್ನ ಹೇಳಿದ್ದಾರೆ. ಆತ್ಮಹತ್ಯೆಗೂ ಪ್ರಯತ್ನಿಸಿ ಪ್ರಾಣಾಪಾಯದಿಂದ ಪಾರಾಗಿದ್ದಾರೆ ಅಂತ ಕೇಳಿದ್ದೇನೆ. ಇದಕ್ಕೆ ಬಿಜೆಪಿ ನಾಯಕರು ಉತ್ತರ ಕೊಡಬೇಕು. ಬಿಜೆಪಿ ನಿಷ್ಟಾವಂತ ಕಾರ್ಯಕರ್ತರಿಗೆ ಯಾವ ರೀತಿ ಕಿರುಕುಳ ಕೊಡ್ತಿದ್ದಾರೆ. ಯಾವ ರೀತಿ ಅಧಿಕಾರ ದುರ್ಬಳಕೆ ಮಾಡ್ತಿದ್ದಾರೆ ಅಂತ ಅವರನ್ನ ಫ್ರಂಟ್ನಲೈನ್ನಲ್ಲಿ ಕರೆದೊಯ್ಯುವ ಬಿಜೆಪಿ ನಾಯಕರು ಇದರ ಬಗ್ಗೆ ಹೇಳಬೇಕು ಎಂದು ಹೇಳಿದ್ದಾರೆ.