ಬಿಜೆಪಿ ಶಾಸಕ ಯತ್ನಾಳ್ ಉಚ್ಚಾಟನೆ: ಸಂಸದ ಬಸವರಾಜ್ ಬೊಮ್ಮಾಯಿ ಹೇಳಿದ್ದೇನು?

0
A pro-development budget by a developed India
Spread the love

ನವದೆಹಲಿ:- ಬಿಜೆಪಿ ಶಾಸಕ ಯತ್ನಾಳ್ ಉಚ್ಚಾಟನೆ ಮಾಡಿದ ವಿಚಾರಕ್ಕೆ ಸಂಬಂಧಿಸಿದಂತೆ ಸಂಸದ ಬಸವರಾಜ್ ಬೊಮ್ಮಾಯಿ ಪ್ರತಿಕ್ರಿಯೆ ಕೊಟ್ಟಿದ್ದಾರೆ.

Advertisement

ಈ ಸಂಬಂಧ ಮಾತನಾಡಿದ ಅವರು, ಪಕ್ಷದ ಹೈಕಮಾಂಡ್ ತೆಗೆದುಕೊಳ್ಳುವ ನಿರ್ಣಯವನ್ನು ನಾವೆಲ್ಲರೂ ಪಾಲಿಸಬೇಕಾಗುತ್ತದೆ. ಬರುವಂತಹ ದಿನಗಳಲ್ಲಿ ಪಕ್ಷಕ್ಕೆ ಯಾವುದೇ ರೀತಿಯ ನಷ್ಟವಾಗದ ರೀತಿಯಲ್ಲಿ ನಾವು ನಡೆದುಕೊಳ್ಳಬೇಕಿದೆ ಎಂದರು.

ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರ ವಿಷಯದ ಬಗ್ಗೆ ವರಿಷ್ಠರ ಜೊತೆ ಚರ್ಚಿಸಿ ಮಾತನಾಡುತ್ತೇನೆ. ನಾವು ಸಂಜೆ 6 ಗಂಟೆವರೆಗೂ ಸಂಸತ್ತಿನಲ್ಲಿ ಇದ್ದೆವು. ಅಲ್ಲಿಂದ ಹೊರಗೆ ಬಂದಾಗ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರ ಉಚ್ಚಾಟನೆಯ ಸುದ್ದಿ ಕೇಳಿ ಬಂದಿತು. ಬಿಜೆಪಿ ಒಂದು ರಾಷ್ಟ್ರೀಯ ಪಕ್ಷ ತನ್ನದೇ ಆದ ನೀತಿ ನಿರ್ಧಾರಗಳನ್ನು ಹಾಕಿಕೊಂಡಿರುವ ಪಕ್ಷ. ಕರ್ನಾಟಕದ ವಿಚಾರದಲ್ಲಿ ಕಳೆದ ಒಂದು ವರ್ಷದಿಂದ ಪಕ್ಷದ ಹೈಕಮಾಂಡ್ ಎಲ್ಲರನ್ನೂ ಕರೆದು ಮಾತನಾಡಿಸಿ ಒಗ್ಗೂಡಿಸುವ ಪ್ರಯತ್ನ ಮಾಡಿದೆ ಎಂದು ಹೇಳಿದರು.

ಈಗ ಶಿಸ್ತು ಮುಖ್ಯ ಎಂದು ಒಂದು ಕಾಲಘಟ್ಟಕ್ಕೆ ಬಂದಿರುವುದರಿಂದ ಕೆಲವರಿಗೆ ನೋಟಿಸ್ ಕೊಟ್ಟಿದ್ದಾರೆ. ಕೆಲವರ ಮೇಲೆ ಕ್ರಮ ಕೈಗೊಂಡಿದ್ದಾರೆ. ಈ ವಿಚಾರವಾಗಿ ಏನೆಲ್ಲಾ ಇದೆ ಎಂದು ವರಿಷ್ಠರನ್ನು ಭೇಟಿ ಮಾಡಿಲ್ಲ. ಆದಷ್ಟು ಎಲ್ಲರನ್ನೂ ಒಂದುಗೂಡಿಸಿ ಕರೆದುಕೊಂಡು ಹೋಗುವುದು ಇಂದಿನ ಅನಿವಾರ್ಯತೆ ಇದೆ ಎಂದು ಹೇಳಿದರು.


Spread the love

LEAVE A REPLY

Please enter your comment!
Please enter your name here