ವಿಜಯಸಾಕ್ಷಿ ಸುದ್ದಿ, ಶಿರಹಟ್ಟಿ: ಕಾಂಗ್ರೆಸ್ ಸರಕಾರವು ಅಗತ್ಯ ವಸ್ತುಗಳ ಬೆಲೆ ಏರಿಕೆ ಮಾಡುತ್ತಿರುವುದನ್ನು ಖಂಡಿಸಿ ಶಾಸಕ ಡಾ. ಚಂದ್ರು ಲಮಾಣಿ ನೇತೃತ್ವದಲ್ಲಿ ಬಿಜೆಪಿ ಕಾರ್ಯಕರ್ತರು ಪಟ್ಟಣದ ಶ್ರೀ ಹನುಮಂತ ದೇವರ ದೇವಸ್ಥಾನದಿಂದ ಬೃಹತ್ ಪ್ರತಿಭಟನೆ ನಡೆಸಿ ಟೈರ್ಗಳಿಗೆ ಬೆಂಕಿ ಹಚ್ಚಿ ಸರಕಾರದ ವಿರುದ್ಧ ಘೋಷಣೆಗಳನ್ನು ಕೂಗಿದರು.
ಈ ಸಂದರ್ಭದಲ್ಲಿ ಮಾತನಾಡಿದ ಶಾಸಕ ಡಾ. ಚಂದ್ರು ಲಮಾಣಿ, ಕಾಂಗ್ರೆಸ್ ಸರಕಾರದ ಉಚಿತ ಗ್ಯಾರಂಟಿ ಯೋಜನೆಗಳ ಮೂಲಕ ರಾಜ್ಯದ ಬಡಜನತೆಗೆ ಹಾಗೂ ಅರ್ಹ ಫಲಾನುಭವಿಗಳಿಗೆ ಅನುಕೂಲ ಕಲ್ಪಿಸಲಾಗಿದೆ ಎಂದು ಹೇಳುತ್ತ ಶ್ರೀಸಾಮಾನ್ಯರಿಗೆ ಬೆಲೆ ಏರಿಕೆ ಮೂಲಕ ಮೋಸ ಮಾಡುತ್ತಿದೆ. ನಿರಂತರವಾಗಿ ಬಸ್, ವಿದ್ಯುತ್, ಹಾಲು, ಮೊಸಲು, ತರಕಾರಿ, ಪೆಟ್ರೋಲ್, ಡೀಸೆಲ್, ಬಿತ್ತನೆ ಬೀಜ, ಅಬಕಾರಿ ಸುಂಕ, ಇಂಜಿನಿಯರಿಂಗ್ ಸೀಟುಗಳ ಶುಲ್ಕ ಮುಂತಾದವುಗಳ ಬೆಲೆ ಹೆಚ್ಚಳ ಮಾಡಿ ಶಾಕ್ ನೀಡಿದೆ ಎಂದರು.
ಬಿಜೆಪಿ ತಾಲೂಕಾಧ್ಯಕ್ಷ ಅಧ್ಯಕ್ಷ ಸುನೀಲ ಮಹಾಂತಶೆಟ್ಟರ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಫಕ್ಕಿರೇಶ ರಟ್ಟಿಹಳ್ಳಿ, ನಾಗರಾಜ ಲಕ್ಕುಂಡಿ, ನಾಗರಾಜ ಕುಲಕರ್ಣಿ, ತಿಮ್ಮರಡ್ಡಿ ಮರಡ್ಡಿ, ಮೋಹನ್ ಗುತ್ತೆಮ್ಮನವರ, ಬಿ.ಡಿ. ಪಲ್ಲೇದ, ಸಂತೋಷ ಓಬಾಜಿ, ಹಾಲಪ್ಪ ಸೂರಣಗಿ, ನಂದಾ ಪಲ್ಲೇದ ಮಾತನಾಡಿದರು.
ಮುಖಂಡ ಜಾನು ಲಮಾಣಿ, ಅಶೋಕ ವರವಿ, ಬಸವರಾಜ ಪೂಜಾರ, ತಿಪ್ಪಣ್ಣ ಲಮಾಣಿ, ಪ್ರವೀಣಗೌಡ ಪಾಟೀಲ, ಯಲ್ಲಪ್ಪ ಇಂಗಳಗಿ, ಮಹೇಶ ಬಡ್ನಿ, ಪರಶುರಾಮ ಡೊಂಕಬಳ್ಳಿ, ಬಸವರಾಜ ವಡವಿ, ಸಂದೇಶ ಗಾಣಗೇರ, ಶಿವಣ್ಣ ಲಮಾಣಿ, ಬಸವರಾಜ ನಾಯ್ಕರ್, ಬಸವರಾಜ ತುಳಿ ಸೇರಿದಂತೆ ಅನೇಕರು ಪ್ರತಿಭಟನೆಯಲ್ಲಿ ಇದ್ದರು. ಪಿಎಸ್ಐ ಚನ್ನಯ್ಯ ದೇವೂರ ಹಾಗೂ ಸಿಬ್ಬಂದಿಗಳು ಸೂಕ್ತ ಬಂದೋಬಸ್ತ್ ಕೈಗೊಂಡಿದ್ದರು.