Home Karnataka News Metro ದರ ಏರಿಕೆ ಖಂಡಿಸಿ ಮೆಟ್ರೋ ನಿಲ್ದಾಣದಲ್ಲಿ BJP ಪ್ರತಿಭಟನೆ: ತೇಜಸ್ವಿ ಸೂರ್ಯ- ರಾಮಮೂರ್ತಿ ಪೊಲೀಸರ ವಶಕ್ಕೆ

Metro ದರ ಏರಿಕೆ ಖಂಡಿಸಿ ಮೆಟ್ರೋ ನಿಲ್ದಾಣದಲ್ಲಿ BJP ಪ್ರತಿಭಟನೆ: ತೇಜಸ್ವಿ ಸೂರ್ಯ- ರಾಮಮೂರ್ತಿ ಪೊಲೀಸರ ವಶಕ್ಕೆ

0
Metro ದರ ಏರಿಕೆ ಖಂಡಿಸಿ ಮೆಟ್ರೋ ನಿಲ್ದಾಣದಲ್ಲಿ BJP ಪ್ರತಿಭಟನೆ: ತೇಜಸ್ವಿ ಸೂರ್ಯ- ರಾಮಮೂರ್ತಿ ಪೊಲೀಸರ ವಶಕ್ಕೆ
Spread the love

ಬೆಂಗಳೂರು: ಮೆಟ್ರೋ ದರ ಏರಿಕೆಯನ್ನು ಖಂಡಿಸಿ ಆರ್‌ವಿ ಮೆಟ್ರೋ ನಿಲ್ದಾಣದ ಬಳಿ ನಡೆದ ಪ್ರತಿಭಟನೆಯ ವೇಳೆ ಬೆಂಗಳೂರು ದಕ್ಷಿಣ ಕ್ಷೇತ್ರದ ಬಿಜೆಪಿ ಸಂಸದ ತೇಜಸ್ವಿ ಸೂರ್ಯ ಹಾಗೂ ಜಯನಗರ ಶಾಸಕ ರಾಮಮೂರ್ತಿ ಅವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಪ್ರತಿಭಟನೆಗೆ ಅನುಮತಿ ಇಲ್ಲವೆಂದು ಪೊಲೀಸರು ಮುಂಚಿತವಾಗಿಯೇ ನೋಟಿಸ್ ನೀಡಿದ್ದರೂ ಇಂದು ಬಿಜೆಪಿ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು. ಈ ವೇಳೆ ಖಾಲಿ ಟ್ರಂಕ್ ಹಿಡಿದುಕೊಂಡು ಆಗಮಿಸಿದ ತೇಜಸ್ವಿ ಸೂರ್ಯ, ಟ್ರಂಕ್ ತೆರೆದು “ರಾಜ್ಯ ಸರ್ಕಾರ ಖಾಲಿಯಾಗಿದೆ” ಎಂದು ಟೀಕಿಸಿದರು.

ನಾನು ಪ್ರತಿಭಟನೆ ಮಾಡುತ್ತಿಲ್ಲ, ಖಾಲಿ ಟ್ರಂಕ್ ಹಿಡಿದಿದ್ದೇನೆ. ನನ್ನನ್ನು ಯಾರೂ ತಡೆಯಬಾರದು ಎಂದು ತೇಜಸ್ವಿ ಸೂರ್ಯ ಹೇಳಿದರು. ಪೊಲೀಸರು ತಡೆದಾಗ, ಸಂಸತ್ ಅಧಿವೇಶನ ನಡೆಯುತ್ತಿರುವ ಸಂದರ್ಭದಲ್ಲಿ ನನ್ನನ್ನು ವಶಕ್ಕೆ ಪಡೆಯುವಂತಿಲ್ಲ. ಕಾನೂನು ತಿಳಿದುಕೊಂಡು ವಶಕ್ಕೆ ಪಡೆಯಿರಿ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಇದಾದ ಬಳಿಕ ಪೊಲೀಸರು ತೇಜಸ್ವಿ ಸೂರ್ಯ ಅವರನ್ನು ವಶಕ್ಕೆ ಪಡೆದು, ಟ್ರಂಕ್ ಮೇಲಿದ್ದ “ಕಾಂಗ್ರೆಸ್ ಸರ್ಕಾರ ಖಾಲಿ ಟ್ರಂಕ್ ಸರ್ಕಾರ” ಎಂಬ ಪೋಸ್ಟರ್ ಅನ್ನು ತೆರವುಗೊಳಿಸಿದರು.

ಇದೇ ವೇಳೆ ಬಿಜೆಪಿ ಮೌನ ಪ್ರತಿಭಟನೆಯಲ್ಲಿ ಭಾಗಿಯಾಗಿ ಮಾತನಾಡಿದ ಶಾಸಕ ರಾಮಮೂರ್ತಿ, ಮೆಟ್ರೋ ದರ ಏರಿಕೆಗೆ ತಾತ್ಕಾಲಿಕ ತಡೆ ನೀಡಿರುವುದಾಗಿ ಹೇಳಲಾಗುತ್ತಿದೆ. ಆದರೆ ದರ ಏರಿಕೆಯನ್ನು ಸಂಪೂರ್ಣವಾಗಿ ಕೈಬಿಡಬೇಕು. ಈಗಿರುವ ದರವನ್ನೂ ಕಡಿಮೆ ಮಾಡಬೇಕು. ಈ ವಿಚಾರದಲ್ಲಿ ರಾಜ್ಯ ಸರ್ಕಾರ ಸುಳ್ಳು ಹೇಳುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.


Spread the love

LEAVE A REPLY

Please enter your comment!
Please enter your name here