ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ- ಮಾಜಿ ಸಂಸದ ಪ್ರತಾಪ್ ಸಿಂಹ ಭೇಟಿ!

0
Spread the love

ಮೈಸೂರು: ಒಡೆದ ಮನೆಯಂತಾಗಿರುವ ರಾಜ್ಯ ಬಿಜೆಪಿಯಲ್ಲಿ ಯತ್ನಾಳ್‌ ಬಣ ಹಾಗೂ ಬಿವೈ ವಿಜಯೇಂದ್ರ ನಡುವಿನ ಮುಸುಕಿನ ಗುದ್ದಾಟ ತಾರಕಕ್ಕೇರಿತ್ತು. ಮಾಜಿ ಸಂಸದ ಪ್ರತಾಪ್ ಸಿಂಹ ಬಸನಗೌಡ ಯತ್ನಾಳ್ ಬಣದೊಂದಿಗೆ ಗುರುತಿಸಿಕೊಂಡಿದ್ದಾರೆ ಮತ್ತು ಬಣ ನಡೆಸುವ ಎಲ್ಲ ಮೀಟಿಂಗ್, ವಕ್ಫ್ ಹೋರಾಟದಲ್ಲಿ ಭಾಗಿಯಾಗುತ್ತಾರೆ ಮತ್ತು ಟೀಮಿನೊಂದಿಗೆ ದೆಹಲಿ ಹೋಗಿ ಅಲ್ಲೂ ಪತ್ರಿಕಾ ಗೋಷ್ಠಿ ನಡೆಸಿ ಮಾತಾಡುತ್ತಾರೆ.

Advertisement

ಆದ್ರೆ ಇಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರರನ್ನು ಮಾಜಿ ಸಂಸದ ಪ್ರತಾಪ್ ಸಿಂಹ ಭೇಟಿಯಾಗಿದ್ದಾರೆ. ಮೈಸೂರು ಹೊರವಲಯದ ಖಾಸಗಿ ಹೋಟೆಲ್ ನಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರರನ್ನು ಭೇಟಿಯಾದ ಪ್ರತಾಪ್ ಸಿಂಹ ಕೆಲಕಾಲ ಪ್ರಸ್ತುತ ಬೆಳವಣಿಗೆಗಳ ಬಗ್ಗೆ ಚರ್ಚೆ ಮಾಡಿದ್ದಾರೆ.

ಹೌದು ನಗರದ ರಿಂಗ್ ರೋಡ್ ಬಳಿ ಇರುವ ಖಾಸಗಿ ಹೋಟೆಲ್ ಗೆ ಬಂದಿಳಿದ ವಿಜಯೇಂದ್ರ ಅವರನ್ನು ನೋಡಲು ಮಾಜಿ ಸಂಸದ ಪ್ರತಾಪ್ ಸಿಂಹ ಅಲ್ಲಿಗೆ ಆಗಮಿಸಿದರು. ಹೋಟೆಲ್ ಬಳಿ ಪೊಲೀಸರು ಬ್ಯಾರಿಕೇಡ್ ಹಾಕಿ ಸುರಕ್ಷತೆ ಕಲ್ಪಿಸಿದ್ದರು. ವಿಜಯೇಂದ್ರ ಅವರು ಮೈಸೂರಿಗೆ ಪ್ರವೇಶಿಸುವ ಮುನ್ನವೇ ಪ್ರತಾಪ್ ಸಿಂಹ ಭೇಟಿ ನೀಡಿದ್ದು ಮಹತ್ವ ಪಡೆದುಕೊಂಡಿದೆ.


Spread the love

LEAVE A REPLY

Please enter your comment!
Please enter your name here