ಅಮಿತ್ ಶಾ ಭೇಟಿಯಾದ ಬಿಜೆಪಿ ರಾಜ್ಯಾಧ್ಯಕ್ಷ: ಚಾಣಕ್ಯನ ಮುಂದೆ ವಿಜಯೇಂದ್ರರ ಆರೋಪವೇನು?

0
Spread the love

ಬೆಂಗಳೂರು:- ಕೇಂದ್ರ ಗೃಹ ಸಚಿವ ಅಮಿತ್‌ ಶಾ ಅವರನ್ನು ಬುಧವಾರ ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಅವರು ಭೇಟಿ ಮಾಡಿದ್ದಾರೆ. ಭೇಟಿ ವೇಳೆ ಕರ್ನಾಟಕದಲ್ಲಿ ಇತ್ತೀಚೆಗೆ ಪಕ್ಷದಲ್ಲಿ ಉಲ್ಬಣಗೊಂಡಿರುವ ಆಂತರಿಕ ಕಚ್ಚಾಟದ ಬಗ್ಗೆ ಚರ್ಚೆ ಮಾಡಿದ್ದಾರೆ.

Advertisement

ಹಾಗೂ ರಾಜ್ಯದಲ್ಲಿ ಕಳೆದೊಂದು ವರ್ಷದ ಪಕ್ಷ ಸಂಘಟನೆ, ಹೋರಾಟ ಕುರಿತು ರಿಪೋರ್ಟ್ ಸಲ್ಲಿಕೆ ಮಾಡಿದ್ದಾರೆ. ತಮ್ಮ ಒಂದು ವರ್ಷದ ಸಾಧನೆಯ ವರದಿ ಕೊಡುವ ಮೂಲಕ ಕುತೂಹಲ ಹುಟ್ಟಿಸಿದ್ದಾರೆ. ಯತ್ಬಾಳ್ ತಂಡದ ಎರಡನೇ ಹಂತದ ವಕ್ಫ್ ಹೋರಾಟ ವಿಚಾರವನ್ನು ಹೈಕಮಾಂಡ್‌ ಗಮನಕ್ಕೆ ತಂದರು.

ಈ ವರ್ಷಾರಂಭದಿಂದ ಪಕ್ಷದ ವತಿಯಿಂದ ಕೈಗೊಳ್ಳಲಿರುವ ಹೋರಾಟಗಳ ಬಗ್ಗೆ ಪ್ರತ್ಯೇಕ ವರದಿ ಕೂಡ ಸಲ್ಲಿಸಿದ್ದಾರೆ. ಸಚಿನ್ ಆತ್ಮಹತ್ಯೆ ಪ್ರಕರಣಕ್ಕೂ ಪ್ರಿಯಾಂಕ್ ಖರ್ಗೆಗೂ ಸಂಬಂಧ ಇರುವ ಬಗ್ಗೆ ಮಾಹಿತಿ ನೀಡಿದ್ದಾರೆ.

ಪ್ರಕರಣದಲ್ಲಿ ಬಿಜೆಪಿಯ ಹೋರಾಟ, ಕಲಬುರ್ಗಿ ಪ್ರತಿಭಟನೆ ಬಗ್ಗೆಯೂ ತಿಳಿಸಿದ್ದಾರೆ. ಹಾಗೆಯೇ, ಬಾಣಂತಿಯರ ಸರಣಿ ಸಾವು ಪ್ರಕರಣದಲ್ಲಿ ಸರ್ಕಾರದ ಲೋಪಗಳು, ನಿರ್ಲಕ್ಷ್ಯ, ಬಿಜೆಪಿ ಹೋರಾಟ ಕುರಿತೂ ಗಮನ ಸೆಳೆದಿದ್ದಾರೆ.


Spread the love

LEAVE A REPLY

Please enter your comment!
Please enter your name here