ಹಣ ಬಲ, ತೋಳ್ಬಲದಿಂದ ದೆಹಲಿಯಲ್ಲಿ ಬಿಜೆಪಿ ಗೆದ್ದಿದೆ: ಮುಖ್ಯಮಂತ್ರಿ ಚಂದ್ರು!

0
Spread the love

ಬೆಂಗಳೂರು:- ದೆಹಲಿ ಸೋಲನ್ನ ಹೀನಾಯ ಸೋಲು ಎಂದು ನಾನು ಹೇಳುವುದಿಲ್ಲ ಎಂದು ಮುಖ್ಯಮಂತ್ರಿ ಚಂದ್ರು ಅವರು ಹೇಳಿದ್ದಾರೆ.

Advertisement

ರಾಷ್ಟ ರಾಜಧಾನಿ ದೆಹಲಿಯ ವಿಧಾನಸಭಾ ಚುನಾವಣೆಯಲ್ಲಿ ಎಎಪಿ ಸೋಲು ಕಂಡಿರುವ ಕುರಿತು ನಗರದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಈ ಸೋಲನ್ನ ಹೀನಾಯ ಸೋಲು ಅಂತ ಹೇಳುವುದಿಲ್ಲ ಎಂದಿದ್ದಾರೆ.

ಗೆದ್ದಿರೋರಿಗೆ ಮೊದಲು ಅಭಿನಂದನೆ ಸಲ್ಲಿಸುತ್ತೇನೆ. ನಮ್ಮ ಪಕ್ಷ ಸೋತಿರೋದು ನಿಜ. ಅದರೆ, ಇದು ಸಂಪೂರ್ಣವಾದ ಸೋಲಲ್ಲ. ನಮ್ಮ ಪಕ್ಷದವರನ್ನೂ ಜನ ಗೆಲ್ಲಿಸಿದ್ದಾರೆ. ಜನರಲ್ಲಿ ನಮ್ಮ ಪಕ್ಷದ ಮೇಲೆ‌ ನಂಬಿಕೆ ಇದೆ ಎಂದಿದ್ದಾರೆ. ಬಿಜೆಪಿ ಇಡೀ ಸರ್ಕಾರವೇ ದೆಹಲಿಯ ಚುನಾವಣೆಯಲ್ಲಿ ನಿಂತಿತ್ತು. ಜೊತೆಗೆ ಕೇಂದ್ರ ಸರ್ಕಾರ ತನ್ನ ಅಧೀನದಲ್ಲಿರೋ ಸಂಸ್ಥೆಗಳನ್ನ ಬಳಸಿಕೊಂಡು ನಮ್ಮ ಪಕ್ಷವನ್ನ ಹೇಗಾದ್ರು ಮಾಡಿ ನಿರ್ನಾಮ ಮಾಡಬೇಕು ಅಂತ ಪಣ ತೊಟ್ಟಿದ್ದರು. ಐಟಿ, ಇಡಿ, ಚುನಾವಣಾ ಆಯೋಗವನ್ನ ಬಳಿಸಿಕೊಂಡರು ಎಂದು ಆರೋಪಿಸಿದ್ದಾರೆ.

ಹಣ ಬಲ, ತೋಳ್ಬಲದಿಂದ ಬಿಜೆಪಿ ಗೆದ್ದಿದೆ. ಗೆದ್ದ ಪಕ್ಷ ಜನರಿಗೆ ನೀಡಿರುವ ಭರವಸೆಯನ್ನ ಈಡೇರಿಸಬೇಕು. ಅಭಿವೃದ್ಧಿ ಕಾರ್ಯಗಳನ್ನ ಮಾಡಬೇಕು. ಸೋಲನ್ನು ನಾವು ಸ್ವೀಕಾರ ಮಾಡುತ್ತೇವೆ ಎಂದು ಎಂದು ತಿಳಿಸಿದ್ದಾರೆ.


Spread the love

LEAVE A REPLY

Please enter your comment!
Please enter your name here