ರಾಮನಗರ: ಚನ್ನಪಟ್ಟಣದಲ್ಲಿ ಪಾದಯಾತ್ರೆಯಲ್ಲಿ ನಡೆಯುತ್ತಿರುವ ವೇಳೆ ಬೆಂಗಳೂರಿನ ಬಸವನಗುಡಿಯ ಬಿಜೆಪಿ ಕಾರ್ಯಕರ್ತೆ ಗೌರಮ್ಮ ಹೃದಯಾಘಾತದಿಂದ ಕುಸಿದುಬಿದ್ದು ಸಾವನ್ನಪ್ಪಿರುವ ಘಟನೆ ನಡೆದಿದೆ. ಚನ್ನಪಟ್ಟಣದಲ್ಲಿ ಪಾದಯಾತ್ರೆ ನಡೆಯುತ್ತಿರುವ ವೇಳೆ ಗೌರಮ್ಮ ಹೃದಯಾಘಾತದಿಂದ ಕುಸಿದುಬಿದ್ದಿದ್ದಾರೆ.
Advertisement
ಕೂಡಲೇ ಅವರನ್ನ ಚನ್ನಪಟ್ಟಣದ ಆಸ್ಪತ್ರೆಗೆ ಕರೆದೊಯ್ಯಲಾಗಿದೆ. ಆದ್ರೆ, ಅಷ್ಟರಾಗಲೇ ಗೌರಮ್ಮ ಕೊನೆಯುಸಿರೆಳೆದಿದ್ದಾರೆ. ಸದ್ಯ ಗೌರಮ್ಮ ಮೃತದೇಹ ಚನ್ನಪಟ್ಟಣ ಸರ್ಕಾರಿ ಆಸ್ಪತ್ರೆಯಲ್ಲಿದ್ದು, ಜೆಡಿಎಸ್ ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಮತ್ತು ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಅವರು ಆಸ್ಪತ್ರೆಗೆ ಭೇಟಿ ನೀಡಿ ಮೃತ ಕಾರ್ಯಕರ್ತೆಯ ಅಂತಿಮ ದರ್ಶನ ಪಡೆದರು.