ಬಿಜೆಪಿಯವರು ಆಪರೇಷನ್ ಕಮಲ ಮಾಡುವುದರಲ್ಲಿ ಎತ್ತಿದ ಕೈ: ಡಾ.ಜಿ‌.ಪರಮೇಶ್ವರ್ ಟೀಕೆ

0
Spread the love

ಮೈಸೂರು: ಬಿಜೆಪಿಯವರು ಆಪರೇಷನ್ ಕಮಲ ಮಾಡುವುದರಲ್ಲಿ ಎತ್ತಿದ ಕೈ ಎಂದು ಗೃಹ ಸಚಿವ ಡಾ.ಜಿ‌.ಪರಮೇಶ್ವರ್ ಟೀಕಿಸಿದ್ದಾರೆ. ಮೈಸೂರಿನಲ್ಲಿ ಮಾತನಾಡಿದ ಅವರು, ಶಾಸಕರ ಖರೀದಿಗೆ ಬಿಜೆಪಿ ಈಗಲೂ ಪ್ರಯತ್ನ ಮಾಡುತ್ತಿದೆ. ಆದರೆ ಎಷ್ಟು ಕೋಟಿ ಎಂಬುದು ಗೊತ್ತಿಲ್ಲ. ಪ್ರಯತ್ನವನ್ನಂತೂ ಮಾಡುತ್ತಲೇ ಇರುತ್ತಾರೆ.

Advertisement

ಮುಖ್ಯಮಂತ್ರಿಗಳೇ ಕೋಟಿ ವಿಚಾರ ಹೇಳಿದ ಮೇಲೆ ಅದು ಸತ್ಯ ಇರಬಹುದು. ಈ ವಿಚಾರವಾಗಿ ಸರಿಯಾದ ದಾಖಲೆ ಸಿಕ್ಕರೆ ಅದರ ಬಗ್ಗೆಯೂ ತನಿಖೆ ಮಾಡುತ್ತೇವೆ. ಬಿಜೆಪಿಯವರು ಆಪರೇಷನ್ ಕಮಲ ಮಾಡುವುದರಲ್ಲಿ ಎತ್ತಿದ ಕೈ ಎಂದು ಟೀಕಿಸಿದ್ದಾರೆ.

ಇನ್ನೂ 40% ಕಮಿಷನ್ ಪ್ರಕರಣಕ್ಕೆ ಸಂಬಂಧಿಸಿದಂತೆ ನಾವು ಕೆಂಪಣ್ಣ ಆಯೋಗ ಬರೆದ ಪತ್ರದ ಮೇಲೆ ಹೋರಾಟ ಮಾಡಿದ್ದೆವು. ನಮಗೆ ಅದೇ ದಾಖಲೆ. ಈಗ ಲೋಕಾಯುಕ್ತದವರು ಯಾವ ಆಧಾರದ ಮೇಲೆ ಸಾಕ್ಷಿ ಇಲ್ಲ ಎನ್ನುತ್ತಿದ್ದಾರೆ ಎಂಬುದನ್ನು ನೋಡಬೇಕಿದೆ. ಅಗತ್ಯಬಿದ್ದರೆ ಮರುತನಿಖೆಗೆ ಒಳಪಡಿಸಲು ನಾವು ಸಿದ್ಧ ಎಂದರು.


Spread the love

LEAVE A REPLY

Please enter your comment!
Please enter your name here