Channapatnam by election: ಬಿಜೆಪಿಗಿಂತ “ಕರಿಯ ಕುಮಾರಸ್ವಾಮಿ ಡೇಂಜರ್”: ಹೆಚ್ ಡಿಕೆ ವ್ಯಂಗ್ಯ ಮಾಡಿದ ಜಮೀರ್!

0
Spread the love

ರಾಮನಗರ:- ಕೇಂದ್ರ ಸಚಿವ ಹೆಚ್​ಡಿ ಕುಮಾರಸ್ವಾಮಿ ವಿರುದ್ಧ ವಸತಿ ಸಚಿವ ಜಮೀರ್ ಅಹಮ್ಮದ್ ಖಾನ್ ಅವಹೇಳನಕಾರಿ ಹೇಳಿಕೆ ಕೊಟ್ಟಿದ್ದಾರೆ.

Advertisement

ಚನ್ನಪಟ್ಟಣದಲ್ಲಿ ಕಾಂಗ್ರೆಸ್​ ಅಭ್ಯರ್ಥಿ ಸಿಪಿ ಯೋಗೇಶ್ವರ ಪರವಾಗಿ ಜಮೀರ್​ ಅಹ್ಮದ್​ ಪ್ರಚಾರಕ್ಕೆ ಇಳಿದಿದ್ದರು. ಪ್ರಚಾರ ಭಾಷಣದಲ್ಲಿ ಹೆಚ್​ಡಿ ಕುಮಾರಸ್ವಾಮಿ ವಿರುದ್ಧ ವಾಗ್ದಾಳಿ ಮಾಡುವ ಭರದಲ್ಲಿ “ಬಿಜೆಪಿಯವರಿಗಿಂತ ಕರಿಯ ಕುಮಾರಸ್ವಾಮಿ ಹೆಚ್ಚು ಖತರ್ನಾಕ್​​” ಎಂದು ಉರ್ದುವಿನಲ್ಲಿ ಹೇಳಿದರು.

ಯೋಗೇಶ್ವರ್ ನಮ್ಮ ಪಕ್ಷದಿಂದ ರಾಜಕೀಯ ಪ್ರಾರಂಭ ಮಾಡಿದರು. ಕೆಲವು ವ್ಯತ್ಯಾಸಗಳಾಗಿ ಬಿಜೆಪಿಗೆ ಹೋದರು. ಜೆಡಿಎಸ್ ಹೋಗಬೇಕು ಅಂತ ಅಂದುಕೊಂಡಿದ್ದರು, ಆದರೆ ಕರಿಯ ಕುಮಾರಸ್ವಾಮಿ, ಬಿಜೆಪಿಗಿಂತ ಡೇಂಜರ್ ಅಂತ‌ ಜೆಡಿಎಸ್​ಗೆ ಹೋಗಿಲ್ಲ.

ಈ ಹಿಂದೆ ಹಿಜಾಬ್ ಬೇಡೆ ಅಂದಿದ್ದೀರಿ. ಈಗ ನಿನಗೆ ಮುಸಲ್ಮಾನರ ಮತ ಬೇಕಾ? ಕುಮಾರಸ್ವಾಮಿ ಬಿಜೆಪಿಗೆ ಹೋಗಿ ಮುಸಲ್ಮಾನರನ್ನು ಖರೀದಿ ಮಾಡ್ತಾನಂತೆ. ಏ ಕುಮಾರಸ್ವಾಮಿ ನಿನ್ ರೇಟು ಹೇಳು, ಮುಸಲ್ಮಾನರು ಒಂದೊಂದ್ ಪೈಸೆ ಹಾಕಿ ಇಡೀ ನಿನ್ನ ಕುಟುಂಬವನ್ನೇ ಖರೀದಿ ಮಾಡುತ್ತಾರೆ” ಎಂದು ವಾಗ್ದಾಳಿ ಮಾಡಿದ್ದಾರೆ.


Spread the love

LEAVE A REPLY

Please enter your comment!
Please enter your name here