ತುಮಕೂರು:- ಕೃಷಿ ಹೊಂಡದಲ್ಲಿ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಡ್ರೋನ್ ಪ್ರತಾಪ್ಗೆ ಜಾಮೀನು ಮಂಜೂರು ಮಾಡಲಾಗಿದೆ.
ಮಧುಗಿರಿ 4ನೇ ಹೆಚ್ಚುವರಿ ಸೆಷನ್ಸ್ ನ್ಯಾಯಾಲಯವು ಡ್ರೋನ್ ಪ್ರತಾಪ್ಗೆ ಜಾಮೀನು ಮಂಜೂರು ಮಾಡಿದ್ದು, ಇದರಿಂದ ಮಾಜಿ ಬಿಗ್ ಬಾಸ್ ಸ್ಪರ್ಧಿ ಡ್ರೋನ್ ಪ್ರತಾಪ್ ಅವರಿಗೆ ರಿಲೀಫ್ ಸಿಕ್ಕಂತಾಗಿದೆ.
ಘಟನೆ ಹಿನ್ನೆಲೆ:-
ತುಮಕೂರು ಜಿಲ್ಲೆಯ ಮಧುಗಿರಿ ತಾಲೂಕಿನ ಜನಕಲೋಟಿ ಗ್ರಾಮದ ಬಳಿ ಕೃಷಿ ಹೊಂಡದಲ್ಲಿ ಅವರು ಸೋಡಿಯಂ ಬಳಸಿ ಸ್ಫೋಟ ಮಾಡಿದ್ದರು. ಆ ವಿಡಿಯೋವನ್ನು ಅವರು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ. ವಿಡಿಯೋ ನೋಡಿದ ಪೊಲೀಸರು ಸ್ವಯಂಪ್ರೇರಿತವಾಗಿ ಪ್ರಕರಣ ದಾಖಲಿಸಿಕೊಂಡಿದ್ದರು.
ಅರೆಸ್ಟ್ ಆದ ಬಳಿಕ ಡ್ರೋನ್ ಪ್ರತಾಪ್ಗೆ ಕೋರ್ಟ್ 10 ದಿನಗಳ ಕಾಲ ನ್ಯಾಯಾಂಗ ಬಂಧನ ವಿಧಿಸಿತ್ತು. ಡಿಸೆಂಬರ್ 26ರ ತನಕ ಅವರು ನ್ಯಾಯಾಂಗ ಬಂಧನದಲ್ಲಿ ಇರಬೇಕಾಗಿತ್ತು. ಆದರೆ ಈಗ ಜಾಮೀನು ಮಂಜೂರು ಆಗಿರುವುದರಿಂದ ಬಿಡುಗಡೆ ಭಾಗ್ಯ ಸಿಗುತ್ತಿದೆ.