ಯೋಧರಿಗಾಗಿ ರಕ್ತದಾನ ಶಿಬಿರ ನಾಳೆ

0
Spread the love

ವಿಜಯಸಾಕ್ಷಿ ಸುದ್ದಿ, ಗದಗ: ನಗರದ ದಿ ಕಾಟನ್ ಸೇಲ್ ಸೊಸೈಟಿ ಆವರಣದಲ್ಲಿರುವ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಗದಗ ಜಿಲ್ಲಾ ಯುವ ಕಾಂಗ್ರೆಸ್ ಸಮಿತಿ ವತಿಯಿಂದ ‘ನಮಗಾಗಿ ಗಡಿಯಲ್ಲಿ ರಕ್ತ ಹರಿಸುವ ಯೋಧರಿಗಾಗಿ ನಾವು ಮಾಡೋಣ ರಕ್ತದಾನ’ ಘೋಷವಾಕ್ಯದಡಿ ಯೋಧರಿಗಾಗಿ ರಕ್ತದಾನ ಶಿಬಿರವನ್ನು ಮೇ 17ರಂದು ಬೆಳಿಗ್ಗೆ 9ಕ್ಕೆ ಹಮ್ಮಿಕೊಳ್ಳಲಾಗಿದೆ ಎಂದು ಜಿಲ್ಲಾ ಯುವ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಕೃಷ್ಣಗೌಡ ಎಚ್. ಪಾಟೀಲ ತಿಳಿಸಿದ್ದಾರೆ.

Advertisement

ಈ ಕುರಿತು ಪ್ರಕಟಣೆ ನೀಡಿರುವ ಅವರು, ದೇಶದ ಗಡಿಯಲ್ಲಿ ನಮ್ಮನ್ನು ಕಾಯಲು ಬಲಿದಾನಗೈಯುತ್ತಿರುವ ಭಾರತೀಯ ಸೇನೆ ಯೋಧರಿಗಾಗಿ ರಕ್ತದಾನ ಶಿಬಿರ ಏರ್ಪಡಿಸಲಾಗಿದೆ. ಶಿಬಿರದಲ್ಲಿ ಕಾಂಗ್ರೆಸ್ ಪಕ್ಷದ ಮಾಜಿ ಹಾಗೂ ಹಾಲಿ ಶಾಸಕರು, ಪಕ್ಷದ ಜಿಲ್ಲಾ ಪದಾಧಿಕಾರಿಗಳು, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರು, ಪದಾಧಿಕಾರಿಗಳು, ಜಿಲ್ಲಾ ಪಂಚಾಯಿತಿ, ತಾಲೂಕು ಪಂಚಾಯಿತಿ, ಗ್ರಾಮ ಪಂಚಾಯಿತಿ, ಎಪಿಎಂಸಿ ಪಕ್ಷದ ಅಧ್ಯಕ್ಷರು, ಸದಸ್ಯರು, ನಗರಸಭೆ, ಪಟ್ಟಣ ಪಂಚಾಯಿತಿ, ಪುರಸಭೆ ಅಧ್ಯಕ್ಷರು, ಸದಸ್ಯರು, ಮಹಿಳಾ ಕಾಂಗ್ರೆಸ್, ಯುವ ಕಾಂಗ್ರೆಸ್, ಎಸ್‌ಸಿ/ಎಸ್‌ಟಿ, ಅಲ್ಪಸಂಖ್ಯಾತರ, ವಿದ್ಯಾರ್ಥಿ ಕಾಂಗ್ರೆಸ್, ಕಾಂಗ್ರೆಸ್ ಸೇವಾದಳ, ಹಿಂದುಳಿದ ವರ್ಗ, ಸಾಮಾಜಿಕ ಜಾಲತಾಣ, ರಾಜೀವಗಾಂಧಿ ಪಂಚಾಯತ ಸಂಘಟನೆ, ಮಾಜಿ ಸೈನಿಕರ ವಿಭಾಗ, ಮೀನುಗಾರ ವಿಭಾಗ, ಕಾರ್ಮಿಕರ ವಿಭಾಗ, ಐಎನ್‌ಟಿಯುಸಿ, ಕಾನೂನು ಮತ್ತು ಮಾನವ ಹಕ್ಕು ವಿಭಾಗ, ಕಿಸಾನ್ ಮತ್ತು ಖೆತ್ ಮಜದೂರ ವಿಭಾಗ, ಮಾಜಿ ಸೈನಿಕರ ವಿಭಾಗ, ವೈದ್ಯರ ವಿಭಾಗ, ವೃತ್ತಿಪರ ವಿಭಾಗ, ಪದವೀಧರ ಹಾಗೂ ಶಿಕ್ಷಕರ ವಿಭಾಗ, ನೀತಿ ಮತ್ತು ಸಂಶೋಧನೆ ತರಬೇತಿ ವಿಭಾಗ, ವಿಕಲಚೇತನರ ವಿಭಾಗ, ಲಿಗಲ್ ರೀಪಾರ್ಮ್ಸ್ ವಿಭಾಗ, ಐಟಿ ಮತ್ತು ಡಾಟಾ ವಿಭಾಗ, ಮಾಧ್ಯಮ ಮತ್ತು ಸಂಪರ್ಕ ಇಲಾಖೆ ವಿಭಾಗಗಳ ಅಧ್ಯಕ್ಷರು ಹಾಗೂ ಸದಸ್ಯರು, ಪಕ್ಷದ ಅಭಿಮಾನಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕು ಎಂದು ಮನವಿ ಮಾಡಿದ್ದಾರೆ.


Spread the love

LEAVE A REPLY

Please enter your comment!
Please enter your name here