ವಿಜಯಸಾಕ್ಷಿ ಸುದ್ದಿ, ಮುಳಗುಂದ: ರಕ್ತದಾನಕ್ಕೆ ಒಂದು ಅಮೂಲ್ಯವಾದ ಜೀವವನ್ನು ಉಳಿಸುವ ಶಕ್ತಿ ಇದೆ. ಹೀಗಾಗಿ ರಕ್ತದಾನವು ಅತ್ಯಂತ ಶ್ರೇಷ್ಠ ದಾನವಾಗಿದೆ ಎಂದು ಮುಳಗುಂದ ಪ್ರಾಥಮಿಕ ಆರೋಗ್ಯ ಕೇಂದ್ರದ ಡಾ. ಪ್ರವೀಣ ತುಪ್ಪದ ಹೇಳಿದರು.
ಅವರು ಪಟ್ಟಣದ ಆರ್.ಎನ್. ದೇಶಪಾಂಡೆ ಸರಕಾರಿ ಪ್ರಥಮದರ್ಜೆ ಕಾಲೇಜಿನಲ್ಲಿ ಅಂತಾರಾಷ್ಟ್ರೀಯ ರೆಡ್ ಕ್ರಾಸ್ ದಿನಾಚರಣೆ ಅಂಗವಾಗಿ ರಕ್ತದಾನ ಮಹತ್ವ ಹಾಗೂ ಜಾಗೃತಿ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದರು.
ಪ್ರತಿಯೊಂದು ಜೀವಿ ಬದುಕಲು ರಕ್ತ ತುಂಬಾ ಅವಶ್ಯವಾಗಿದ್ದು, ಈ ನಿಟ್ಟಿನಲ್ಲಿ ಪ್ರತಿಯೊಬ್ಬರೂ ರಕ್ತದಾನ ಮಾಡುವುದರಿಂದ ಉತ್ತಮ ಆರೋಗ್ಯ ಹೊಂದುವುದರ ಜೊತೆಯಲ್ಲಿ ಮತ್ತೊಂದು ಜೀವ ಉಳಿಸುವ ಮಹಾನ್ ಕಾರ್ಯದಲ್ಲಿ ಪಾಲ್ಗೊಂಡಂತಾಗುತ್ತದೆ ಎಂದರು.
ಅಧ್ಯಕ್ಷತೆಯನ್ನು ಪ್ರಾಚಾರ್ಯ ಆರ್.ಎಂ. ಕಲ್ಲನಗೌಡರ ವಹಿಸಿದ್ದರು. ಮಾರುತಿ, ನಾಗರಾಜ ಎ, ಆರೋಗ್ಯ ಸಿಬ್ಬಂದಿ ನಜೀರ್ ಹಾಗೂ ಕಾಲೇಜು ಬೋಧಕ-ಬೋಧಕೇತರ ಸಿಬ್ಬಂದಿ ಇದ್ದರು.