ರಕ್ತಕ್ಕೆ ರಕ್ತವೇ ಉತ್ತರವಾಗಬೇಕು: ಸಾಮಾಜಿಕ ಜಾಲತಾಣಗಳಲ್ಲಿ ಪ್ರಚೋದನಕಾರಿ ಸ್ಟೇಟಸ್ ಹಾಕಿದ್ದ ಯುವಕ ಅರೆಸ್ಟ್!

0
Spread the love

ಮಂಗಳೂರು: ಸಾಮಾಜಿಕ ಜಾಲತಾಣಗಳಲ್ಲಿ ಪ್ರಚೋದನಕಾರಿ ಸ್ಟೇಟಸ್ ಹಾಕಿದ್ದ ಯುವಕನನ್ನು ಇದೀಗ ಅರೆಸ್ಟ್ ಮಾಡಲಾಗಿದೆ.

Advertisement

ಕರಾವಳಿಯಲ್ಲಿ ಕೋಮು ಸಂಘರ್ಷವನ್ನು ತಡೆಗಟ್ಟಲು ಸ್ಪೆಷಲ್ ಆ್ಯಕ್ಷನ್ ಫೋರ್ಸ್ ಫುಲ್ ಆ್ಯಕ್ಟೀವ್ ಆಗಿದ್ದು, ಪ್ರಚೋದನಾಕಾರಿ ಪೋಸ್ಟ್ ಹಾಕುವವರನ್ನು ಬೆನ್ನಟ್ಟಿ ಬೆಂಡೆತ್ತುತ್ತಿದೆ. “ರಕ್ತಕ್ಕೆ ರಕ್ತವೇ ಬೇಕು” ಎಂದು ಸ್ಟೇಟಸ್ ಹಾಕಿದವನು ಬಂಧಿಸಿದೆ.

ಉಡುಪಿ ಜಿಲ್ಲೆಯ ಕಾರ್ಕಳ, ಇರ್ವತ್ತೂರು ಗ್ರಾಮದ ಆಶಿಕ್ ಎಸ್ ಕೋಟ್ಯಾನ್​​ ಎಂಬಾತನನ್ನು ಸ್ಪೆಷಲ್ ಆ್ಯಕ್ಷನ್ ಫೋರ್ಸ್​ ಬಂಧಿಸಿದೆ. ತನ್ನ ಇನ್ಸ್ಟಾಗ್ರಾಮ್ ಖಾತೆಯಲ್ಲಿ “ನಮಗೆ ಯಾವುದೇ ರೀತಿಯ ಉತ್ತರಗಳು ಬೇಡ ರಕ್ತಕ್ಕೆ ರಕ್ತವೇ ಉತ್ತರವಾಗಬೇಕು”. “ಜೀವಕ್ಕೆ ಜೀವನೇ ಬೇಕು” ಎಂದು ಮಾರಕಾಯುಧಗಳ ಚಿಹ್ನೆ ಬಳಸಿ ಪ್ರಚೋದನಕಾರಿ ಸ್ಟೇಟಸ್ ಹಾಕಿದ್ದ.

ಈ ಹಿನ್ನಲೆ ಆರೋಪಿ ವಿರುದ್ಧ ಮಂಗಳೂರು ದಕ್ಷಿಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, BNS ಕಲಂ.196, 353(2),351(3) ಯಡಿ ಎಫ್​ಐಆರ್ ದಾಖಲಾಗಿದೆ. ಪೊಲೀಸರು ಆರೋಪಿಯನ್ನ ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.


Spread the love

LEAVE A REPLY

Please enter your comment!
Please enter your name here