ಬೆಂಗಳೂರು:- ರಾಜಧಾನಿ ಬೆಂಗಳೂರಿನಲ್ಲಿ ಮತ್ತೊಂದು ಬಿಎಂಟಿಸಿ ಬಸ್ ನಿಂದ ಅಪಘಾತ ಸಂಭವಿಸಿದೆ.
ಕಮಲನಗರ ಬಸ್ ನಿಲ್ದಾಣದ ಬಳಿ ನಿನ್ನೆ ಸಂಜೆ ಆಟೋಗೆ ಡಿಕ್ಕಿ ಹೊಡೆದು ಬೈಕ್ ಮೇಲೆ ಬಿಎಂಟಿಸಿ ಬಸ್ ಹರಿದಿದೆ. ಅದೃಷ್ಟವಶಾತ್ ಘಟನೆಯಲ್ಲಿ ಯಾವುದೇ ಪ್ರಾಣಪಾಯ ಸಂಭವಿಸಿಲ್ಲ. ಬ್ರೇಕ್ ಫೇಲ್ ಆಗಿದ್ದ ಕಾರಣಕ್ಕೆ ಈ ದುರಂತ ಸಂಭವಿಸಿದೆ ಎಂಬ ಮಾಹಿತಿ ಲಭ್ಯವಾಗಿದೆ.
ಘಟನೆಯ ದೃಶ್ಯಾವಳಿ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ವಿಜಯನಗರ ಸಂಚಾರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅಪಘಾತ ಸಂಭವಿಸಿದೆ.



