ಬೆಂಗಳೂರು:- ಇತ್ತೀಚೆಗೆ ಕೆಂಗೇರಿಯ ಮೈಲಸಂದ್ರದ ಬಳಿ ಮೆಟ್ರೋ ಪಿಲ್ಲರ್ಗೆ BMTC ಬಸ್ ಡಿಕ್ಕಿ ಹೊಡೆದು ಗಂಭೀರ ಗಾಯಗೊಂಡಿದ್ದ 12 ಮಂದಿ ಪೈಕಿ ಓರ್ವ ಚಿಕಿತ್ಸೆ ಫಲಿಸದೇ ಸಾವನ್ನಪ್ಪಿದ್ದಾರೆ. 57 ವರ್ಷದ ಜಯರಾಮ್ ಮೃತ ವ್ಯಕ್ತಿ.
Advertisement
ಶುಕ್ರವಾರ ರಾತ್ರಿ 8:30ರ ಸುಮಾರಿಗೆ ಕೆಂಗೇರಿಯ ಮೈಲಸಂದ್ರದ ಬಳಿ ಮೆಟ್ರೋ ಪಿಲ್ಲರ್ಗೆ ಬಸ್ ಡಿಕ್ಕಿಯಾದ ಘಟನೆ ನಡೆದಿತ್ತು. ಡ್ರೈವರ್, ಕಂಡಕ್ಟರ್ ಸೇರಿ 12 ಮಂದಿ ಗಾಯಗೊಂಡಿದ್ದರು. ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದ್ರೆ ಚಿಕಿತ್ಸೆ ಫಲಿಸದೇ ಶನಿವಾರ ತಡರಾತ್ರಿ ಓರ್ವ ವ್ಯಕ್ತಿ ಸಾವನ್ನಪ್ಪಿದ್ದಾರೆ. ಘಟನೆ ಸಂಬಂಧ ಕೆಂಗೇರಿ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.