ಹೃದಯಾಘಾತದಿಂದ BMTC ಡ್ರೈವರ್ ಸಾವು: ಬಸ್ ರನ್ನಿಂಗ್ ನಲ್ಲಿರುವಾಗಲೇ ಅವಘಡ!

0
Spread the love

ಬೆಂಗಳೂರು:- ಹೃದಯಾಘಾತದಿಂದ BMTC ಡ್ರೈವರ್ ಸಾವನ್ನಪ್ಪಿರುವ ಘಟನೆ ರಾಜಧಾನಿ ಬೆಂಗಳೂರಿನ ಯಶವಂತಪುರ ಬಳಿ ಘಟನೆ ಜರುಗಿದೆ. ಬಸ್​ನಲ್ಲಿ 50ಕ್ಕೂ ಹೆಚ್ಚು ಪ್ರಯಾಣಿಕರು ಇರುವಾಗಲೇ ಈ ದುರ್ಘಟನೆ ಸಂಭವಿಸಿದೆ.

Advertisement

39 ವರ್ಷದ ಕಿರಣ್ ಮೃತಪಟ್ಟ ಡ್ರೈವರ್ ಎನ್ನಲಾಗಿದೆ. ನೆಲಮಂಗಲ ಕಡೆಯಿಂದ ಯಶವಂತಪುರ ಕಡೆಗೆ ಬಿಎಂಟಿಸಿ ಬಸ್ ಅನ್ನು ಚಾಲನೆ ಮಾಡಿಕೊಂಡು ಬರುವಾಗ ಡ್ರೈವರ್​ಗೆ ಎದೆನೋವು ಕಾಣಿಸಿಕೊಂಡಿತ್ತು. ಹೀಗಾಗಿ ತಕ್ಷಣವೇ ಬಸ್ ನಿಲ್ಲಿಸಿದ್ದನು.

ಎದೆನೋವು ತೀವ್ರವಾಗಿ ಕಾಣಿಸಿಕೊಂಡು ಹೃದಯಾಘಾತದಿಂದ ಡ್ರೈವರ್ ಸಾವನ್ನಪ್ಪಿದ್ದಾನೆ. ಈ ವೇಳೆ ಬಸ್​ನಲ್ಲಿ 50ಕ್ಕೂ ಪ್ರಯಾಣಿಕರಿದ್ದು ಯಾವುದೇ ತೊಂದರೆಯಾಗಿಲ್ಲ ಎಂದು ತಿಳಿದು ಬಂದಿದೆ.


Spread the love

LEAVE A REPLY

Please enter your comment!
Please enter your name here