HomeGadag Newsಪ್ರತಿಪಕ್ಷ, ರೈತರನ್ನು ಹತ್ತಿಕ್ಕಲು ದ್ವೇಷ ಭಾಷಣ ನಿಯಂತ್ರಣ ಕಾನೂನು: ಬಸವರಾಜ ಬೊಮ್ಮಾಯಿ

ಪ್ರತಿಪಕ್ಷ, ರೈತರನ್ನು ಹತ್ತಿಕ್ಕಲು ದ್ವೇಷ ಭಾಷಣ ನಿಯಂತ್ರಣ ಕಾನೂನು: ಬಸವರಾಜ ಬೊಮ್ಮಾಯಿ

For Dai;y Updates Join Our whatsapp Group

Spread the love

ಗದಗ: ರಾಜ್ಯ ಸರ್ಕಾರ ಎಲ್ಲ ರಂಗದಲ್ಲಿಯೂ ವಿಫಲವಾಗಿದ್ದು, ಎಲ್ಲ ಇಲಾಖೆಗಳಲ್ಲಿ ಭ್ರಷ್ಟಾಚಾರ ಹೆಚ್ಚಾಗಿದ್ದು, ಅದರ ವಿರುದ್ಧ ಮಾತನಾಡದಂತೆ ವಿರೋಧ ಪಕ್ಷ, ರೈತರು, ಜನ ಸಾಮಾನ್ಯರನ್ನು ದಮನ ಮಾಡಲು ವ್ಯಕ್ತಿಯ ಸ್ವಾತಂತ್ರ್ಯ ಹರಣ ಮಾಡಲು ಸಂವಿಧಾನ ವಿರುದ್ಧ ದ್ವೇಷ ಭಾಷಣ ನಿಯಂತ್ರಣ ಕಾನೂನು ತಂದಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಆರೋಪಿಸಿದ್ದಾರೆ.

ಗದಗನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ಪಕ್ಷ ಯಾವುದೇ ರೀತಿಯ ಅಭಿವೃದ್ಧಿ ಮಾಡಿಲ್ಲ. ಯಾವ ಇಲಾಖೆಯಲ್ಲಿಯೂ ಕೆಲಸ ಆಗುತ್ತಿಲ್ಲ. ಭ್ರಷ್ಟಾಚಾರ ಹೆಚ್ಚಾಗಿದೆ. ರಾಜ್ಯವನ್ನು ದಿವಾಳಿ ಮಾಡಿದ್ದಾರೆ. ಜನರು ಇದನ್ನು ವಿರೋಧ ಮಾಡಬಾರದು ಎಂದು ದ್ವೇಷ ಭಾಷಣದ ವಿರುದ್ಧ ಕಾನೂನು ಮಾಡಿದ್ದಾರೆ.

ಕಾಂಗ್ರೆಸ್‌ ನವರೇ ಹೆಚ್ಚು ದ್ವೇಷ ಭಾಷಣ ಮಾಡಿದ್ದಾರೆ. ಈಗಾಗಲೇ ದ್ವೇಷ ಭಾಷಣ ಮಾಡುವುದನ್ನು ನಿಯಂತ್ರಿಸಲು ಬಿಎನ್‌ಎಸ್ ಕಾನೂನಿದೆ. ಇವರು ವಿರೋಧ ಪಕ್ಷ, ರೈತರನ್ನು, ಜನ ಸಾಮಾನ್ಯರನ್ನು ದಮನ ಮಾಡಲು ವ್ಯಕ್ತಿಯ ಸ್ವಾತಂತ್ರ್ಯ ಹರಣ ಮಾಡಲು ಸಂವಿಧಾನದ ವಿರುದ್ಧ ಈ ಕಾನೂನು ತಂದಿದ್ದಾರೆ ಎಂದು ಹೇಳಿದರು.

ಜಿ. ರಾಮ್ ಜಿ ವಿಧೇಯಕವನ್ನು ಕಾಂಗ್ರೆಸ್ ವಿರೋಧಿಸುತ್ತಿರುವ ಕುರಿತು ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ಜಿ ರಾಮ್ ಜಿ ವಿಧೇಯಕದ ಬಗ್ಗೆ ಸಂಸತ್ತಿನಲ್ಲಿ ಸುಮಾರು ಹದಿನೈದು ಗಂಟೆಗಳಿಗಿಂತ ಸುದೀರ್ಘವಾಗಿ ಚರ್ಚೆಯಾಗಿದೆ. ಪ್ರಮುಖವಾಗಿ ಹದಿನೈದು ಇಪ್ಪತ್ತು ವರ್ಷದಿಂದ ಇದ್ದ ಕಾನೂನು ಇವತ್ತಿನ ಗ್ರಾಮೀಣ ಪರಿಸ್ಥಿತಿ ಬಹಳ ಬದಲಾಗಿದೆ.

ಅದರ ಅನುಗುಣವಾಗಿ ಬದಲಾವಣೆ ಮಾಡಾಲಾಗಿದೆ. ಭ್ರಷ್ಟಾಚಾರ ಹೆಚ್ಚಾಗಿತ್ತು. ಯೋಜನೆ ದುರುಪಯೋಗ ಆಗುತ್ತಿರುವ ಆರೋಪ ಇತ್ತು. ತಾಂತ್ರಿಕವಾಗಿ ಅದನ್ನು ನಿಲ್ಲಿಸಲು ಕ್ರಮ ಕೈಗೊಳ್ಳಲಾಗಿದೆ. ಸೋರಿಕೆ ತಡೆಯಲಾಗಿದೆ. ಆಸ್ತಿ ಮಾಡಲು ಹೆಚ್ಚಿನ ಆದ್ಯತೆ ನೀಡಲಾಗಿದೆ. ದೇಶ ಕಟ್ಟುವ ಪ್ರಕ್ರಿಯೆಯಲ್ಲಿ ಈ ಯೋಜನೆ ಬಳಕೆ ಆಗಬೇಕೆಂದು ಬದಲಾವಣೆ ತಂದಿದ್ದಾರೆ.

ಪ್ರತಿ ವರ್ಷ ಒಂದು ಲಕ್ಷ ಹನ್ನೊಂದು ಸಾವಿರ ಕೋಟಿ ರೂ. ಖರ್ಚು ಮಾಡಲಾಗುತ್ತಿದೆ. ಅದು ಒಳ್ಳೆಯ ಉದ್ದೇಶಕ್ಕೆ ಆಗಬೇಕು. ಬಹಳಷ್ಟು ರಾಜ್ಯಗಳಲ್ಲಿ ದುರುಪಯೋಗ ಆಗುತ್ತಿತ್ತು. ನೋಂದಣಿ ಅಥವಾ ಉದ್ಯೋಗದ ದಿನಗಳನ್ನು ಕಡಿಮೆ ಮಾಡಿಲ್ಲ. 25 ದಿನ ಹೆಚ್ಚಿಗೆ ಮಾಡಲಾಗಿದೆ. ಆದ್ದರಿಂದ ಇದೊಂದು ಪ್ರಗತಿಪರವಾಗಿದೆ. ವಿರೋಧ ಪಕ್ಷಗಳು ಇದನ್ನು ವಿರೋಧ ಮಾಡಲು ವಿರೋಧಿಸುತ್ತಿವೆ ಎಂದು ಹೇಳಿದರು.


Spread the love
Vijaya Sakshi
Vijaya Sakshi
Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

LEAVE A REPLY

Please enter your comment!
Please enter your name here

E-Paper

E-paper

Must Read

spot_img
error: Content is protected !!