ಮಣ್ಣು ತುಂಬಿದ ಲಾರಿ ಡಿಕ್ಕಿ: ಬಾಲಕ ಸಾವು – ಮುಗಿಲು ಮುಟ್ಟಿದ ಪೋಷಕರ ಆಕ್ರಂದನ!

0
Spread the love

ಕಲಬುರಗಿ:- ಜಿಲ್ಲೆಯ ಸೇಡಂ ತಾಲೂಕಿನ ಮಳಖೇಡ ಬಳಿ ಸಂಭವಿಸಿದ ಅಪಘಾತದಲ್ಲಿ ಬಾಲಕ ಸಾವನ್ನಪ್ಪಿದ ಘಟನೆ ಜರುಗಿದೆ.

Advertisement

ಸೀಮೆಂಟ್ ಕಂಪನಿಗೆ ತೆರಳುತಿದ್ದ ಮಣ್ಣು ತುಂಬಿದ ಲಾರಿ ಡಿಕ್ಕಿಯಾಗಿ ಬಾಲಕ ಸಾವನ್ನಪ್ಪಿದ್ದಾನೆ. ಐದು ವರ್ಷದ ಅಯ್ಯಪ್ಪ ಮೃತ ಬಾಲಕ. ರಾಜಶ್ರೀ ಸಿಮೆಂಟ್ ಕಾರ್ಖಾನೆ ಪಕ್ಕದಲ್ಲೇ ವಾಸವಾಗಿದ್ದ ಬಾಲಕನಿಗೆ ಜವರಾಯ ಮನೆ ಬಾಗಿಲಿಗೆ ಬಂದಿದ್ದು, ಪೋಷಕರ ಕಣ್ಣೀರ ಕೋಡಿ ಹರಿದಿದೆ.

ಘಟನೆ ಖಂಡಿಸಿ ಸೀಮೆಂಟ್ ಕಾರ್ಖಾನೆ ವಿರುದ್ಧ ಸ್ಥಳೀಯರು ಆಕ್ರೋಶ ಹೊರಹಾಕಿದ್ದಾರೆ. ಮಳಖೇಡ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ತನಿಖೆ ಕೈಗೊಂಡಿದ್ದಾರೆ.


Spread the love

LEAVE A REPLY

Please enter your comment!
Please enter your name here